25.7 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ವಿದ್ವತ್ ಪಿಯು ಕಾಲೇಜಿನಲ್ಲಿ ” ವಿಜ್ ವರ್ಲ್ಡ್- 2024″ ಸ್ಪರ್ಧೆ

ಬೆಳ್ತಂಗಡಿ: ವಿದ್ವತ್ ಪಿಯು ಕಾಲೇಜಿನಲ್ಲಿ” ವಿಜ್ ವರ್ಲ್ಡ್- 2024″ ಸ್ಪರ್ಧೆ ಇಂದು ನಡೆಯಿತು. ಟಿವಿಯಲ್ಲಿ ಪ್ರಸ್ತುತ ಪಡಿಸುವ ಹಾಗೆಯೇ ಒಂದು ಗಂಟೆಯ ಸುದ್ದಿ ಪ್ರಸ್ತುತಪಡಿಸುವನೇರ ಪ್ರಸಾರದ ಸ್ಪರ್ಧೆ ಇದಾಗಿದ್ದು ಸ್ಪರ್ಧೆಯಲ್ಲಿ ವಾಣಿಜ್ಯ ವಿದ್ಯಾರ್ಥಿಗಳು ವಿದ್ವತ್ ಮೀಡಿಯಾ ವಾಹಿನಿ ಹಾಗೂ ವಿದ್ವತ್ ಟೈಮ್ ವಾಹಿನಿಗಳಾಗಿ ಭಾಗವಹಿಸಿದ್ದರು.

ಈ ಒಂದು ಗಂಟೆಯ ಸುದ್ದಿ ಪ್ರಸ್ತುತ ಪಡಿಸುವ ಸ್ಪರ್ಧೆಯಲ್ಲಿ ಸುದ್ದಿ ನಿರೂಪಕರು, ವರದಿಗಾರರು, ಸುದ್ದಿ ವಿಶ್ಲೇಷಕರು, ಚರ್ಚೆ ನಡೆಸಿಕೊಡುವವರು ಹಾಗೂ ಚರ್ಚೆಯಲ್ಲಿ ಭಾಗವಹಿಸುವ ವಿಷಯ ತಜ್ಞರು ಸೇರಿ ಒಟ್ಟು 10 ವಿದ್ಯಾರ್ಥಿಗಳು ಪ್ರತೀ ತಂಡದಲ್ಲಿದ್ದರು. ಡಿಜಿಟಲ್ ತಂತ್ರಜ್ಞಾನ ಬಳಸಿ, ಕಾಲೇಜಿನ ಡಿಜಿಟಲ್ ಬೋರ್ಡ್ನಲ್ಲಿ ಪ್ರಸ್ತುತ ಪಡಿಸಿದ ಈ ಪ್ರಸಾರ ಒಂದು ಟಿವಿ ಮಾಧ್ಯಮ ಒಂದು ಗಂಟೆಯ ನ್ಯೂಸ್‌ನಲ್ಲಿ ಯಾವೆಲ್ಲಾ ಅಂಶಗಳನ್ನು ಹೊರತ್ತರುತ್ತದೆಯೋ ಆ ಎಲ್ಲಾ ಅಂಶಗಳನ್ನು ಒಳಗೊಂಡಿತ್ತು. ಒಂದು ಗಂಟೆಯ ಈ ಪ್ರಸ್ತುತಿ ಯಾವ ಪ್ರತಿಷ್ಠಿತ ಸುದ್ದಿ ವಾಹಿನಿಗೂ ಕೂಡ ಯಾವ ರೀತಿಯಲ್ಲೂ ಕಡಿಮೆಯಿರಲಿಲ್ಲ. ನೆರೆದಿದ್ದ ಪ್ರೇಕ್ಷಕರನ್ನು ಮಂತ್ರ ಮುಗ್ಧರನ್ನಾಗಿಸಿದ ಈ ಕಾರ್ಯಕ್ರಮ ವ್ಯಕ್ತಿತ್ವ ವಿಕಸನಕ್ಕೆ ಹಿಡಿದ ಕನ್ನಡಿಯಂತಿತ್ತು.

ಪ್ರತೀ ಸ್ಪರ್ಧಿಯು ಮಾತನಾಡುವ ಬಗೆ ಅವರ ಸ್ಪಷ್ಠತೆ, ವಿಷಯ ಮಂಡನೆ, ಮುಂತಾದವುಗಳ ಸಂಪೂರ್ಣ
ತರಬೇತಿಯನ್ನ ಇನ್‌ಫೈರ್ ವಿದ್ವತ್ ಪೋರಂವಹಿಸಿಕೊಂಡು ವೃತ್ತಿಪರತೆ ಹಾಗೂ ಸ್ಪರ್ಧಾತ್ಮಕ ಆಯಾಮ ನೀಡುವಲ್ಲಿ ಪ್ರಮುಖ ಪಾತ್ರವಹಿಸಿತ್ತು. ಈ ವಿದ್ವತ್‌ ವಿಜ್ ವರ್ಲ್ಡ್ – 2024″ ಒಂದು ರಚನಾತ್ಮಕ ಹಾಗೂಕ್ರಿಯಾಶೀಲ
ಚಟುವಟಿಕೆಯಾಗಿದ್ದು ವಿದ್ವತ್ ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಬಹುದೊಡ್ಡ ವೇದಿಕೆಯಾಗಿದೆ
ಎಂದು ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕಾಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ಪ್ರತಿಕ್ರಿಯಿಸಿದ್ದಾರೆ. ಸಂಸ್ಥೆಯ ಟ್ರಸ್ಟಿ ಎಂ.ಕೆ ಕಾಶಿನಾಥ್ ಹಾಗೂ ಶೈಕ್ಷಣಿಕ ನಿರ್ದೇಶಕರಾದ
ಗಂಗಾಧರ ಇಮಂಡಗಳಲೆ ಹಾಗೂಪ್ರಾಂಶುಪಾಲರು ಎಲ್ಲಾ
ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Related posts

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ, ಬಾಲಕಿಯರ ತಂಡದ ಕಿರಿಯ ವಿಭಾಗ ದಲ್ಲಿ ಪ್ರಥಮ ಹಾಗೂ ಹಿರಿಯ ವಿಭಾಗ ದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya

ಎಕ್ಸೆಲ್ ವಿದ್ಯಾ ಸಂಸ್ಥೆಗೆ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಶ್ರೀ ಭೇಟಿ – ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಗುರುವಾಯನಕೆರೆ: ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya
error: Content is protected !!