22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆಯು ಮೊದಲ ಬಾರಿಗೆ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಹಾಗೂ ನಿಡ್ಲೆ ಅಗ್ರೀಲೀಫ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ “ಹೇ ಶಾರದೆ” ಫೋಟೊ ಸ್ಪರ್ಧೆ” ಆಯೋಜಿಸಿತ್ತು.

ಇದರ ಫಲಿತಾಂಶವು ಪ್ರಕಟಗೊಂಡಿದ್ದು ಪ್ರಥಮ ಬಹುಮಾನವನ್ನು ಶಾರ್ವಿ ಶೆಟ್ಟಿ ಸುಮುಖ ಸದನ ಕರ್ನೋಡಿ, ದ್ವಿತೀಯ ಬಹುಮಾನವನ್ನು ಓಶ್ಮಿ ಜಿ. ಅಕ್ಕಳ ಮನೆ ಪುತ್ತಿಲ, ತೃತೀಯ ಬಹುಮಾನವನ್ನು ದೀಕ್ಷಿತಾ ಶಿವಾಜಿನಗರ ಲಾಯಿಲ ಇವರು ಪಡೆದುಕೊಂಡಿದ್ದಾರೆ.

ಈ ಹಿಂದೆ ಎರಡು ಬಾರಿ ರಾಧೇ-ಕೃಷ್ಣ ಫೋಟೋ ಸ್ಪರ್ಧೆಯನ್ನು ಬೆಳ್ತಂಗಡಿ ತಾಲೂಕಿನವರಿಗೆ ಆಯೋಜಿಸಿದಾಗ ಹಲವಾರು ತಾಲೂಕಿನ ಹೊರಗಡೆ ಇರುವ ಪತ್ರಿಕೆ ಹಾಗೂ ಆನ್‌ಲೈನ್ ಓದುಗರಿಂದ ನಮಗೂ ಒಂದು ಅವಕಾಶ ನೀಡಿ ಎಂಬ ಬೇಡಿಕೆಯಂತೆ “ಹೇ ಶಾರದೇ” ಎಂಬ ಶಾರದಾ ಫೋಟೋ ಸ್ಪರ್ಧೆ ಆಯೋಜಿಸಿದ್ದು ಅದರಂತೆ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ, ಮಂಗಳೂರು, ಕಾರ್ಕಳದಿಂದ ಇನ್ನೂರಕ್ಕೂ ಮಿಕ್ಕಿ ಫೋಟೋಗಳು ಬಂದಿರುತ್ತದೆ. ಈ ಫೋಟೋ ಸ್ಪರ್ಧೆಯಲ್ಲಿ ಉಜಿರೆ ರಶ್ಮಿ ಸ್ಟುಡಿಯೋದ ರಾಮಕೃಷ್ಣ ರೈ ರವರು ತೀರ್ಪುಗಾರರಾಗಿದ್ದರು.

Related posts

ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya

5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ

Suddi Udaya

ಬಳಂಜ:ಆಮ್ಮಿ ಪೂಜಾರಿ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya
error: Content is protected !!