23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆಯು ಮೊದಲ ಬಾರಿಗೆ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಹಾಗೂ ನಿಡ್ಲೆ ಅಗ್ರೀಲೀಫ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ “ಹೇ ಶಾರದೆ” ಫೋಟೊ ಸ್ಪರ್ಧೆ” ಆಯೋಜಿಸಿತ್ತು.

ಇದರ ಫಲಿತಾಂಶವು ಪ್ರಕಟಗೊಂಡಿದ್ದು ಪ್ರಥಮ ಬಹುಮಾನವನ್ನು ಶಾರ್ವಿ ಶೆಟ್ಟಿ ಸುಮುಖ ಸದನ ಕರ್ನೋಡಿ, ದ್ವಿತೀಯ ಬಹುಮಾನವನ್ನು ಓಶ್ಮಿ ಜಿ. ಅಕ್ಕಳ ಮನೆ ಪುತ್ತಿಲ, ತೃತೀಯ ಬಹುಮಾನವನ್ನು ದೀಕ್ಷಿತಾ ಶಿವಾಜಿನಗರ ಲಾಯಿಲ ಇವರು ಪಡೆದುಕೊಂಡಿದ್ದಾರೆ.

ಈ ಹಿಂದೆ ಎರಡು ಬಾರಿ ರಾಧೇ-ಕೃಷ್ಣ ಫೋಟೋ ಸ್ಪರ್ಧೆಯನ್ನು ಬೆಳ್ತಂಗಡಿ ತಾಲೂಕಿನವರಿಗೆ ಆಯೋಜಿಸಿದಾಗ ಹಲವಾರು ತಾಲೂಕಿನ ಹೊರಗಡೆ ಇರುವ ಪತ್ರಿಕೆ ಹಾಗೂ ಆನ್‌ಲೈನ್ ಓದುಗರಿಂದ ನಮಗೂ ಒಂದು ಅವಕಾಶ ನೀಡಿ ಎಂಬ ಬೇಡಿಕೆಯಂತೆ “ಹೇ ಶಾರದೇ” ಎಂಬ ಶಾರದಾ ಫೋಟೋ ಸ್ಪರ್ಧೆ ಆಯೋಜಿಸಿದ್ದು ಅದರಂತೆ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ, ಮಂಗಳೂರು, ಕಾರ್ಕಳದಿಂದ ಇನ್ನೂರಕ್ಕೂ ಮಿಕ್ಕಿ ಫೋಟೋಗಳು ಬಂದಿರುತ್ತದೆ. ಈ ಫೋಟೋ ಸ್ಪರ್ಧೆಯಲ್ಲಿ ಉಜಿರೆ ರಶ್ಮಿ ಸ್ಟುಡಿಯೋದ ರಾಮಕೃಷ್ಣ ರೈ ರವರು ತೀರ್ಪುಗಾರರಾಗಿದ್ದರು.

Related posts

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅನುಗ್ರಹ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಬೆಳ್ತಂಗಡಿ :ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya
error: Content is protected !!