23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

ಬೆಳ್ತಂಗಡಿ: ಗ್ರಾಮ ಪಂಚಾಯಿತಿ ಸದಸ್ಯರಿಂದ ಲೋಕಸಭೆ ಸದಸ್ಯರವರೆಗೆ ಎಲ್ಲ ಚುನಾಯಿತ ಪ್ರತಿನಿಧಿಗಳಿಗೆ ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯವ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವಿದೆ. ಆದರೆ ಕೆಲವು ನಿಯಮಗಳು ಅನ್ವಯ ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ತಮ್ಮ ಕ್ಷೇತ್ರ ವ್ಯಾಪ್ತಿಯ ಯಾವುದೇ ಒಂದು ಸ್ಥಳೀಯಾಡಳಿತ ಸಂಸ್ಥೆಯನ್ನು ಪ್ರತಿನಿಧಿಸಿದರೆ ಮಾತ್ರ ಪರಿಷತ್ ಚುನಾವಣೆಗೆ ಮತದಾನ ಅವಕಾಶ ಪಡೆಯುತ್ತಾರೆ.

ಈ ಬಾರಿ ವಿಧಾನಪರಿಷತ್ ಉಪಚುನಾವಣೆಯಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರಿಗೆ ಮತದಾನದ ಅವಕಾಶವಿಲ್ಲ.

ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಬೆಳ್ತಂಗಡಿ ಗ್ರಾಮಾಂತರ ಪ್ರದೇಶದ ಮತದಾರರಾಗಿರುವ ಕಾರಣ ಬೆಳ್ತಂಗಡಿ ಪಟ್ಟಣ ಪಂಚಾಯಿತಿಯನ್ನು ಪ್ರತಿನಿಧಿಸುತ್ತಿಲ್ಲ. ಹಾಗಾಗಿ ಇವರ ಹೆಸರು ಸ್ಥಳೀಯಾಡಳಿತ ಸಂಸ್ಥೆಗಳ ಮತದಾರರ ಪಟ್ಟಿಯಲ್ಲಿ ಇಲ್ಲ.

Related posts

ಎ.18 : ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಬಳಂಜ: ಆನೆಪಿಲ ಚಂದ್ರಾವತಿಯಮ್ಮ ಅಸೌಖ್ಯದಿಂದ ನಿಧನ

Suddi Udaya

ಕಾಯರ್ತಡ್ಕ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ನಲ್ಲಿ “ಸ್ವರ್ಣ ಬಿಂದು ಪ್ರಾಶನ” ಶಿಬಿರ

Suddi Udaya

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಬ್ಯಾಗ್ ವಿತರಣೆ

Suddi Udaya
error: Content is protected !!