ಶಿಶಿಲ ಗ್ರಾ.ಪಂ ನಲ್ಲಿ ಕಸ್ತೂರಿರಂಗನ್ ವಿರೋಧಿಸುವ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಶಿಶಿಲ : ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯು ನ. 15 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅ.17 ರಂದು ನಡೆಯಿತು.

ಈ ವೇಳೆ ಕಸ್ತೂರಿ ರಂಗನ್ ಹೋರಾಟಗಾರ ಕಿಶೋರ್ ಶಿರಾಡಿ ಉಪಸ್ಥಿತರಿದ್ದು ಕಸ್ತೂರಿ ರಂಗನ್ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಿಶಿಲ ಗ್ರಾ.ಪಂ ಅಧ್ಯಕ್ಷ ಸುಧೀನ್ , ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಮಾಜಿ ಕಾರ್ಯದರ್ಶಿ ಕರುಣಾಕರ ಶಿಶಿಲ, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕರಾದ ಕೊರಗಪ್ಪ ಗೌಡ, ಕುಶಾಲಪ್ಪ ಗೌಡ, ಶಿಶಿಲ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸಂತೋಷ್ ಹಾಗೂ ಶಿಶಿಲ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Comment

error: Content is protected !!