July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಚಿಕ್ಕಮಗಳೂರಿನ ಕೊಟ್ಟಿಗೆರೆಯಿಂದ ವಿಟ್ಲ ತಾಲೂಕಿನ ಸಾಲೆತ್ತೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಹೋರಿ ಮತ್ತು ಒಂದು ಗೋವುವನ್ನು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸುವ ಮೂಲಕ ಗುರುವಾಯನಕೆರೆ ಹಾಗೂ ವಿಟ್ಲ ತಾಲೂಕಿನ ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ರಕ್ಷಣೆ ಮಾಡಲಾಗಿದ್ದು ಈ ಘಟನೆಯು ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ಅ.18 ರಂದು ನಡೆದಿದೆ.

ವಶಕ್ಕೆ ಪಡೆದಿರುವ ಹೋರಿ ಹಾಗೂ ಗೋವು ಗಳನ್ನು ಸಾಲೆತ್ತೂರಿನ ಅನ್ಯಕೋಮಿನ ವ್ಯಕ್ತಿಯೊಬ್ಬರಿಗೆ ಸೇರಿರುವುದಾಗಿದೆ.

ಕರ್ನಾಟಕದ ಬೇರೆ ಬೇರೆ ಪ್ರದೇಶದಿಂದ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿರುವ ಒಂದು ಮಾಫಿಯಾ ಸಾಲೆತ್ತೂರಿನಲ್ಲಿ ಕೆಲಸ ಮಾಡುತ್ತಿದೆ ಎಂದು ಹಿಂದು ಕಾರ್ಯಕರ್ತರು ತಿಳಿಸಿದ್ದಾರೆ . ಕೇರಳದ ಕಸಾಯಿಖಾನೆಗೆ ಗೋವುಗಳನ್ನು ಸಾಗಿಸುವುದು ನಿತ್ಯ ನಿರಂತರವಾಗಿದೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದರು.

ಅಕ್ರಮ ಗೋ ಸಾಗಾಟದಲ್ಲಿ ವಶಕ್ಕೆ ಪಡೆದಿರುವ ವಾಹನದ ನೋಂದಣಿ ಸಂಖ್ಯೆ KA-16- D-6960 ಹಾಗೂ ಆರೋಪಿಗಳಾದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಬಿನ್ನಡಿ ಗ್ರಾಮದ ಅಶ್ವಥ್ ಮತ್ತು ಬಿನ್ನಡಿ ಗ್ರಾಮದ ಸಚಿನ್ ಬಂಧಿತ ಆರೋಪಿಗಳು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಟೈಲರ್ ಅಸೋಸಿಯೇಶನ್ ವತಿಯಿಂದ ಗುರುವಾಯನಕೆರೆ ಡಾ| ವೇಣುಗೋಪಾಲ ಶರ್ಮರವರಿಗೆ ಸನ್ಮಾನ

Suddi Udaya

ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ಕಾವ್ಯ ವಾಚನ-ಪ್ರವಚನ ಉದ್ಘಾಟನೆ

Suddi Udaya

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ.ಪ.ಪೂ. ಕಾಲೇಜಿನ ಉಪನ್ಯಾಸಕರ ಸಂಘದ ವತಿಯಿಂದ ಗ್ರಂಥಪಾಲಕ ಮನೋಹರ ಶೆಟ್ಟಿಯವರಿಗೆ ಸನ್ಮಾನ

Suddi Udaya

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತೀಯ ಸೇನೆಗೆ ಶಕ್ತಿ ತುಂಬಲು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ

Suddi Udaya
error: Content is protected !!