July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

ಬೆಳ್ತಂಗಡಿ : ಯುಗಾದಿ ನವ ಪಲ್ಲವಕೆ ನಾಂದಿ ತಂಡದಿಂದ ಅ.20 ರಂದು ಧರ್ಮಸ್ಥಳದ ಗ್ರಾ.ಪಂ ಸಮುದಾಯ ಭವನ (ನೇತ್ರಾವತಿ ಸಭಾಂಗಣ)ದಲ್ಲಿ ಸ್ನೇಹಕೂಟ ನಡೆಯಲಿರುವುದು.

ಸ್ನೇಹಕೂಟದ ಉದ್ಘಾಟನೆಯನ್ನು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ವಿಜಯ ಕುಮಾರ್ ಜೈನ್ ಅಳದಂಗಡಿ ನೆರವೇರಿಸಲಿದ್ದಾರೆ. ಹಿರಿಯ ಸಾಹಿತಿಗಳಾದ, ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಶ್ಯಾಮಲಾ ಗೋಪಿನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶೇಷ ಉಪಸ್ಥಿತಿ ಹಿರಿಯ ಸಾಹಿತಿಗಳಾದ ಪೆರ್ಮುಖ ಸುಬ್ರಹ್ಮಣ್ಯ ಭಟ್, ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿಗಳಾದ ಶ್ರೀಮತಿ ಕಲಾವತಿ ಪ್ರಕಾಶ್, ಶರಣ ಬಸಪ್ಪ ಕುಂಬಾರ್,ಶ್ರೀಮತಿ ಡಾ.ಶ್ವೇತಾ ಪ್ರಕಾಶ್, ಹೆಚ್.ಡಿ.ದಿವಾಕರ್, ಭಾಗವಹಿಸಲಿದ್ದಾರೆ.

ಶ್ರೀಮತಿ ಜ್ಞಾನೇಶ್ವರಿ ಉಡುಪ ಮತ್ತು ಶ್ರೀಮತಿ ಸೌಮ್ಯ ಗುರು ಕಾರ್ಲೆ ಯುಗಾದಿ ಧ್ಯೇಯ ಗೀತೆ ಗಾಯನ ಮಾಡಲಿದ್ದಾರೆ.


ಈ ಸಂದರ್ಭದಲ್ಲಿ ಹಲವಾರು ಸಾಹಿತಿಗಳ ಕೃತಿಗಳು ಲೋಕಾರ್ಪಣೆಗೊಳ್ಳಲಿವೆ. ಸಮಾರಂಭದ ವ್ಯವಸ್ಥಾಪಕರಾದ
ಬೆಳ್ತಂಗಡಿ ತಾಲೂಕಿನ ಆಶಾ ಅಡೂರ್, ಶ್ರೀಮತಿ ಶ್ರೀಲತಾ ಭಾರ್ಗವ,ಶ್ರೀಮತಿ ವೀಣಾ ಉಮೇಶ್,ಶ್ರೀಮತಿ ಸುಜಾತ ಭಟ್, ಕಾರ್ಯಕ್ರಮಕ್ಕೆ ವಿಶೇಷ ಸಹಕಾರ ನೀಡಲಿದ್ದಾರೆ. ಆಡಳಿತ ಮಂಡಳಿಯ ಎಂದು ಯುಗಾದಿ ನವ ಪಲ್ಲವಕೆ ನಾಂದಿ ಆಡಳಿತ ಮಂಡಳಿಯ ಶ್ರೀನಾಗ್ ಪಿ.ಎಸ್.ಹೊನ್ನಾವರ ತಿಳಿಸಿದ್ದಾರೆ.

Related posts

ಶಿಬಾಜೆ ಗ್ರಾ.ಪಂ. ನ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೀತಾರಾಮ ಎಸ್ ಅಧಿಕಾರ ಸ್ವೀಕಾರ

Suddi Udaya

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ರಜತ ಮಹೋತ್ಸವದ ಸಂಭ್ರಮದಲ್ಲಿ ವಾಮಂಜೂರಿನ ಎಸ್ ಡಿ ಎಂ ಸಮಗ್ರ ಶಾಲೆ: ಕಲೋತ್ಸವದ ವೇದಿಕೆಯಲ್ಲಿ ಮಿಂಚಿದ ವಿಶೇಷ ಮಕ್ಕಳು

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಜನೋಪಯೋಗಿ ಪ್ರಾಜೆಕ್ಟ್‌ಗಳಿಗೆ ಪ್ರಶಸ್ತಿ: ಪ್ರಾಂಶುಪಾಲ ಸಂತೋಷ್ ರವರಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!