23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

ಬೆಳ್ತಂಗಡಿ : ಯುಗಾದಿ ನವ ಪಲ್ಲವಕೆ ನಾಂದಿ ತಂಡದಿಂದ ಅ.20 ರಂದು ಧರ್ಮಸ್ಥಳದ ಗ್ರಾ.ಪಂ ಸಮುದಾಯ ಭವನ (ನೇತ್ರಾವತಿ ಸಭಾಂಗಣ)ದಲ್ಲಿ ಸ್ನೇಹಕೂಟ ನಡೆಯಲಿರುವುದು.

ಸ್ನೇಹಕೂಟದ ಉದ್ಘಾಟನೆಯನ್ನು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ವಿಜಯ ಕುಮಾರ್ ಜೈನ್ ಅಳದಂಗಡಿ ನೆರವೇರಿಸಲಿದ್ದಾರೆ. ಹಿರಿಯ ಸಾಹಿತಿಗಳಾದ, ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಶ್ಯಾಮಲಾ ಗೋಪಿನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶೇಷ ಉಪಸ್ಥಿತಿ ಹಿರಿಯ ಸಾಹಿತಿಗಳಾದ ಪೆರ್ಮುಖ ಸುಬ್ರಹ್ಮಣ್ಯ ಭಟ್, ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿಗಳಾದ ಶ್ರೀಮತಿ ಕಲಾವತಿ ಪ್ರಕಾಶ್, ಶರಣ ಬಸಪ್ಪ ಕುಂಬಾರ್,ಶ್ರೀಮತಿ ಡಾ.ಶ್ವೇತಾ ಪ್ರಕಾಶ್, ಹೆಚ್.ಡಿ.ದಿವಾಕರ್, ಭಾಗವಹಿಸಲಿದ್ದಾರೆ.

ಶ್ರೀಮತಿ ಜ್ಞಾನೇಶ್ವರಿ ಉಡುಪ ಮತ್ತು ಶ್ರೀಮತಿ ಸೌಮ್ಯ ಗುರು ಕಾರ್ಲೆ ಯುಗಾದಿ ಧ್ಯೇಯ ಗೀತೆ ಗಾಯನ ಮಾಡಲಿದ್ದಾರೆ.


ಈ ಸಂದರ್ಭದಲ್ಲಿ ಹಲವಾರು ಸಾಹಿತಿಗಳ ಕೃತಿಗಳು ಲೋಕಾರ್ಪಣೆಗೊಳ್ಳಲಿವೆ. ಸಮಾರಂಭದ ವ್ಯವಸ್ಥಾಪಕರಾದ
ಬೆಳ್ತಂಗಡಿ ತಾಲೂಕಿನ ಆಶಾ ಅಡೂರ್, ಶ್ರೀಮತಿ ಶ್ರೀಲತಾ ಭಾರ್ಗವ,ಶ್ರೀಮತಿ ವೀಣಾ ಉಮೇಶ್,ಶ್ರೀಮತಿ ಸುಜಾತ ಭಟ್, ಕಾರ್ಯಕ್ರಮಕ್ಕೆ ವಿಶೇಷ ಸಹಕಾರ ನೀಡಲಿದ್ದಾರೆ. ಆಡಳಿತ ಮಂಡಳಿಯ ಎಂದು ಯುಗಾದಿ ನವ ಪಲ್ಲವಕೆ ನಾಂದಿ ಆಡಳಿತ ಮಂಡಳಿಯ ಶ್ರೀನಾಗ್ ಪಿ.ಎಸ್.ಹೊನ್ನಾವರ ತಿಳಿಸಿದ್ದಾರೆ.

Related posts

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ

Suddi Udaya

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

Suddi Udaya
error: Content is protected !!