September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

ಬೆಳ್ತಂಗಡಿ: ದೇಶದ ಬೆಳವಣಿಗೆಯಲ್ಲಿ ಯುವ ಜನಾಂಗ ತೊಡಗಿಸಿಕೊಂಡಾಗ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುವುದು ಎಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ I ಯ ಸಹ ಶಿಕ್ಷಕರಾದ ವಿಕಾಸ್ ರಾವ್ ಹೇಳಿದರು.


ಅವರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ I ಇಲ್ಲಿ ನಡೆದ ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡುತ್ತಾ, ಸಕರಾತ್ಮಕ ಚಿಂತನೆಗಳೊಂದಿಗೆ ನಿಸ್ವಾರ್ಥ ಸೇವೆ, ಭಾವೈಕ್ಯತೆ, ಸೌಹಾರ್ದತೆ ಹಾಗೂ ಜೀವನಾನುಭವಗಳನ್ನು ಎನ್ ಎಸ್ ಎಸ್ ನಿಂದ ಪಡೆಯಲು ಸಾಧ್ಯ. ಇಂತಹ ಚಟುವಟಿಕೆಗಳಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದರು.

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ರಾಜಶೇಖರ ಅಜ್ರಿ, ಬೆಳ್ತಂಗಡಿಯ ಉದ್ಯಮಿಗಳಾದ ಅಭಿನಂದನ್ ಹರೀಶ್ ಕುಮಾರ್, ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಟ್ರಸ್ಟಿ ಗಣೇಶ್ ಕನಾಲು, ಬೆಳ್ತಂಗಡಿ ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಮುನಿರಾಜ ಅಜ್ರಿ, ಬೆಳ್ತಂಗಡಿ ಜೈನ್ ರೆಸ್ಟೋರೆಂಟ್ ನ ಮಾಲಕರಾದ ಸಂತೋಷ್ ಕುಮಾರ್ ಜೈನ್, ನಡ ಗ್ರಾಮ ಪಂಚಾಯಿತ್ ಸದಸ್ಯರಾದ ಪ್ರವೀಣ್ ವಿ ಜೆ, ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕನ್ಯಾಡಿ I ಯ ಮುಖ್ಯೋಪಾಧ್ಯಾಯರಾದ ಹನುಮಂತರಾಯ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನೋಣಯ್ಯ ಗೌಡ, ಜನಾರ್ದನ ಗೌಡ ಕಡ್ತಿಯಾರ್, ನಾರಾಯಣ ಗೌಡ ಕೈಲಾಜೆ ಉಪಸಿತರಿದ್ದರು.


ವಾಣಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಸ್ವಾಗತಿಸಿದರು. ಎನ್ಎಸ್ಎಸ್ ಸಹ ಕಾರ್ಯಕ್ರಮಾಧಿಕಾರಿ ಶ್ರೀಮತಿ ದೀಕ್ಷಾ ವರದಿ ವಾಚಿಸಿದರು. ಎನ್ಎಸ್ಎಸ್ ಮುಖ್ಯಕಾರ್ಯಕ್ರಮಾಧಿಕಾರಿ ಶಂಕರ್ ರಾವ್ ಧನ್ಯವಾದವಿತ್ತರು. ಉಪನ್ಯಾಸಕ ಸುಧೀರ್ ಕೆಎನ್ ಕಾರ್ಯಕ್ರಮ ನಿರೂಪಿಸಿದರು.

Related posts

ಜಿಲ್ಲಾಮಟ್ಟದ ಐಟಿ ಕ್ವಿಜ್‌ ಸ್ಪರ್ಧೆ: ಉಜಿರೆಯ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ

Suddi Udaya

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಮಂಗಳೂರು ಶಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟೇಶ್ ವೈ ಆಯ್ಕೆ

Suddi Udaya

ಕಳೆಂಜ: ಪಲ್ಲದಂಗಡಿ, ಕಾಂತ್ರೇಲು ಹಾಗೂ ಹತ್ಯಡ್ಕದ ಮುದ್ದಿಗೆ, ಕುಂಟಾಲಪಳಿಕೆ ಕೆಎಸ್ ಆರ್ ಟಿಸಿ ಬಸ್ಸು ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ ಮುದ್ದಿಗೆಯ ಗ್ರಾಮಸ್ಥರು

Suddi Udaya

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್: ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಭೇಟಿ ಪರಿಶೀಲನೆ: 241 ಮತಗಟ್ಟೆಗಳಿಗೆ ಮತ ಪೆಟ್ಟಿಗೆ ಹಾಗೂ ಪರಿಕರಗಳ ವಿತರಣೆ ಆರಂಭ

Suddi Udaya
error: Content is protected !!