ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು


ಬೆಳ್ತಂಗಡಿ: ಭಜನೆಗೆ ಬರುವಂತಹ ಮಾತೆಯರನ್ನು ಹಾಗೂ ಸಹೋದರಿಯರನ್ನು ಮತ್ತು ಪುಟಾಣಿಗಳನ್ನು ನಮ್ಮ ಸಮಾಜವು ಅತ್ಯಂತ ಗೌರವದಿಂದ ನೋಡಿಕೊಳ್ಳುತ್ತಿದೆ.

ಇಂತಹ ಸಂದರ್ಭದಲ್ಲಿ ಭಜನೆಗೆ ಜಾತಿಯ ಬಣ್ಣವಿಲ್ಲ ಭಜನೆಯಿಂದ ವಿಭಜನೆ ಇಲ್ಲ ಎನ್ನುವುದನ್ನು ಮರೆತು ಧಾರ್ಮಿಕ ಸಂಘಟನೆಗಳ ಬಗ್ಗೆ ಮತ್ತು ಒಂದು ಸಮುದಾಯವನ್ನು ಗುರಿಯಾಗಿರಿಸಿ ಭಜನೆಗೆ ಬರುವಂತಹ ಹೆಣ್ಣು ಮಕ್ಕಳನ್ನು ಸಮಾಜವು ಅಪಹಸ್ಯದಿಂದ ನೋಡುವಂತಹ ಮಾನಹಾನಿಕರ ಹೇಳಿಕೆ ನೀಡಿ ಮಹಿಳೆಯರಿಗೆ ಅವಮಾನ ಮಾಡಿರುವುದನ್ನು ಖಂಡಿಸುವುದು ಮಾತ್ರವಲ್ಲದೆ ಪದೇ ಪದೇ ಭಜನೆಯ ಹಾಗೂ ಮಹಿಳೆಯರ ಬಗ್ಗೆ ತಪ್ಪು ಹೇಳಿಕೆಗಳನ್ನು ನೀಡಿ ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆದು ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡಲು ಭಜಕರು ಶ್ರದ್ಧಾ ಭಕ್ತಿಯಿಂದ ಮಾಡುತ್ತಿರುವ ಭಜನೆಗೆ ಭಂಗ ತರಲು ಪ್ರಯತ್ನಿಸುತ್ತಿರುವ ಅರಣ್ಯಾಧಿಕಾರಿ ಸಂಜೀವ ಪೂಜಾರಿಯಿಂದ ಮುಚ್ಚಳಿಕೆಯನ್ನು ಬರೆಸಿಕೊಂಡು ಅವರನ್ನು ಅಮಾನತು ಮಾಡಬೇಕು.

ಇಲ್ಲದೆ ಹೋದಲ್ಲಿ ಮುಂದಕ್ಕೆಯು ಇವರು ನೀಡುವಂತ ಅನಗತ್ಯ ಆತಂಕಕಾರಿ ಹೇಳಿಕೆಯಿಂದ ಸಮಾಜದಲ್ಲಿ ಗೊಂದಲಮಯ ವಾತಾವರಣ ನಿರ್ಮಾಣವಾಗಬಹುದು ಎಂದು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ಇದರ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ , ಉಪಾಧ್ಯಕ್ಷ ರಾಜೇಂದ್ರ ಬಸ್ರೂರು ಕುಂದಾಪುರ, ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ವೆಂಕಟೇಶ್ವರ ಭಟ್ ಕಜೆ, ಉಪಾಧ್ಯಕ್ಷ ಜಯಪ್ರಸಾದ್ ಕಡಮ್ಮಜೆ, ಕರಾಯ ವಲಯದ ಸಂಯೋಜಕರಾದ ರಾಜಶೇಖರ್ ಕರಾಯ ಮೊದಲಾದವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸುತ್ತಾರೆ.

Related posts

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮುಂಡಾಜೆ : ಸಂವಿಧಾನ ಜಾಗೃತಿ ಜಾಥಾ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ಶಿಶಿಲ: ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ: ನಿವೃತ್ತ ಕೆ.ಜಯ ಕೀರ್ತಿ ಜೈನ್ ರವರಿಗೆ ಸನ್ಮಾನ

Suddi Udaya

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya
error: Content is protected !!