24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಚಿಕ್ಕಮಗಳೂರಿನ ಕೊಟ್ಟಿಗೆರೆಯಿಂದ ವಿಟ್ಲ ತಾಲೂಕಿನ ಸಾಲೆತ್ತೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಹೋರಿ ಮತ್ತು ಒಂದು ಗೋವುವನ್ನು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸುವ ಮೂಲಕ ಗುರುವಾಯನಕೆರೆ ಹಾಗೂ ವಿಟ್ಲ ತಾಲೂಕಿನ ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ರಕ್ಷಣೆ ಮಾಡಲಾಗಿದ್ದು ಈ ಘಟನೆಯು ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ಅ.18 ರಂದು ನಡೆದಿದೆ.

ವಶಕ್ಕೆ ಪಡೆದಿರುವ ಹೋರಿ ಹಾಗೂ ಗೋವು ಗಳನ್ನು ಸಾಲೆತ್ತೂರಿನ ಅನ್ಯಕೋಮಿನ ವ್ಯಕ್ತಿಯೊಬ್ಬರಿಗೆ ಸೇರಿರುವುದಾಗಿದೆ.

ಕರ್ನಾಟಕದ ಬೇರೆ ಬೇರೆ ಪ್ರದೇಶದಿಂದ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿರುವ ಒಂದು ಮಾಫಿಯಾ ಸಾಲೆತ್ತೂರಿನಲ್ಲಿ ಕೆಲಸ ಮಾಡುತ್ತಿದೆ ಎಂದು ಹಿಂದು ಕಾರ್ಯಕರ್ತರು ತಿಳಿಸಿದ್ದಾರೆ . ಕೇರಳದ ಕಸಾಯಿಖಾನೆಗೆ ಗೋವುಗಳನ್ನು ಸಾಗಿಸುವುದು ನಿತ್ಯ ನಿರಂತರವಾಗಿದೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದರು.

ಅಕ್ರಮ ಗೋ ಸಾಗಾಟದಲ್ಲಿ ವಶಕ್ಕೆ ಪಡೆದಿರುವ ವಾಹನದ ನೋಂದಣಿ ಸಂಖ್ಯೆ KA-16- D-6960 ಹಾಗೂ ಆರೋಪಿಗಳಾದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಬಿನ್ನಡಿ ಗ್ರಾಮದ ಅಶ್ವಥ್ ಮತ್ತು ಬಿನ್ನಡಿ ಗ್ರಾಮದ ಸಚಿನ್ ಬಂಧಿತ ಆರೋಪಿಗಳು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ

Suddi Udaya

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

Suddi Udaya

ತೆಕ್ಕಾರು: ಸರಳಿಕಟ್ಟೆ ಜಂಕ್ಷನ್ ನಲ್ಲಿ ಮೋರಿ ಕುಸಿತ

Suddi Udaya

ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕುತ್ಲೂರು: ಮಂಜುಶ್ರೀ ಭಜನಾ ಮಂಡಳಿಯಿಂದ 29ನೇ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!