September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಚಿಕ್ಕಮಗಳೂರಿನ ಕೊಟ್ಟಿಗೆರೆಯಿಂದ ವಿಟ್ಲ ತಾಲೂಕಿನ ಸಾಲೆತ್ತೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಹೋರಿ ಮತ್ತು ಒಂದು ಗೋವುವನ್ನು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸುವ ಮೂಲಕ ಗುರುವಾಯನಕೆರೆ ಹಾಗೂ ವಿಟ್ಲ ತಾಲೂಕಿನ ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ರಕ್ಷಣೆ ಮಾಡಲಾಗಿದ್ದು ಈ ಘಟನೆಯು ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ಅ.18 ರಂದು ನಡೆದಿದೆ.

ವಶಕ್ಕೆ ಪಡೆದಿರುವ ಹೋರಿ ಹಾಗೂ ಗೋವು ಗಳನ್ನು ಸಾಲೆತ್ತೂರಿನ ಅನ್ಯಕೋಮಿನ ವ್ಯಕ್ತಿಯೊಬ್ಬರಿಗೆ ಸೇರಿರುವುದಾಗಿದೆ.

ಕರ್ನಾಟಕದ ಬೇರೆ ಬೇರೆ ಪ್ರದೇಶದಿಂದ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿರುವ ಒಂದು ಮಾಫಿಯಾ ಸಾಲೆತ್ತೂರಿನಲ್ಲಿ ಕೆಲಸ ಮಾಡುತ್ತಿದೆ ಎಂದು ಹಿಂದು ಕಾರ್ಯಕರ್ತರು ತಿಳಿಸಿದ್ದಾರೆ . ಕೇರಳದ ಕಸಾಯಿಖಾನೆಗೆ ಗೋವುಗಳನ್ನು ಸಾಗಿಸುವುದು ನಿತ್ಯ ನಿರಂತರವಾಗಿದೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದರು.

ಅಕ್ರಮ ಗೋ ಸಾಗಾಟದಲ್ಲಿ ವಶಕ್ಕೆ ಪಡೆದಿರುವ ವಾಹನದ ನೋಂದಣಿ ಸಂಖ್ಯೆ KA-16- D-6960 ಹಾಗೂ ಆರೋಪಿಗಳಾದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಬಿನ್ನಡಿ ಗ್ರಾಮದ ಅಶ್ವಥ್ ಮತ್ತು ಬಿನ್ನಡಿ ಗ್ರಾಮದ ಸಚಿನ್ ಬಂಧಿತ ಆರೋಪಿಗಳು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ಉಜಿರೆ ಹೆಗ್ಡೆ ಮೆಡಿಕಲ್ ವತಿಯಿಂದ ಆರ್ಥಿಕ ಸಂಕಷ್ಟಗೊಳಗಾದವರಿಗೆ ಉಚಿತ ಔಷಧಿ

Suddi Udaya

ಉಪ್ಪಿನಂಗಡಿಯ ವೃತ್ತಕ್ಕೆ ಸ್ವಾತಂತ್ರ್ಯ ಹೋರಾಟಗಾರ ಉಬಾರ್ ಮಂಜ ಬೈದ್ಯರ ಹೆಸರಿನಲ್ಲಿ ನಾಮಕರಣ ಮಾಡಲು ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಮನವಿ

Suddi Udaya

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಬ್ರಹ್ಮಕಲಶೋತ್ಸವದ ಪರ್ವ ಕಾಲದಲ್ಲಿ ಬೆಳ್ತಂಗಡಿ

Suddi Udaya

ಇಂದಬೆಟ್ಟು: ಶ್ರೀ ವೀರಭದ್ರ ದೇವಸ್ಥಾನ ಲಿಂಗತ್ಯಾರು ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!