24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಚಿಕ್ಕಮಗಳೂರಿನ ಕೊಟ್ಟಿಗೆರೆಯಿಂದ ವಿಟ್ಲ ತಾಲೂಕಿನ ಸಾಲೆತ್ತೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಹೋರಿ ಮತ್ತು ಒಂದು ಗೋವುವನ್ನು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸುವ ಮೂಲಕ ಗುರುವಾಯನಕೆರೆ ಹಾಗೂ ವಿಟ್ಲ ತಾಲೂಕಿನ ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ರಕ್ಷಣೆ ಮಾಡಲಾಗಿದ್ದು ಈ ಘಟನೆಯು ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ಅ.18 ರಂದು ನಡೆದಿದೆ.

ವಶಕ್ಕೆ ಪಡೆದಿರುವ ಹೋರಿ ಹಾಗೂ ಗೋವು ಗಳನ್ನು ಸಾಲೆತ್ತೂರಿನ ಅನ್ಯಕೋಮಿನ ವ್ಯಕ್ತಿಯೊಬ್ಬರಿಗೆ ಸೇರಿರುವುದಾಗಿದೆ.

ಕರ್ನಾಟಕದ ಬೇರೆ ಬೇರೆ ಪ್ರದೇಶದಿಂದ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿರುವ ಒಂದು ಮಾಫಿಯಾ ಸಾಲೆತ್ತೂರಿನಲ್ಲಿ ಕೆಲಸ ಮಾಡುತ್ತಿದೆ ಎಂದು ಹಿಂದು ಕಾರ್ಯಕರ್ತರು ತಿಳಿಸಿದ್ದಾರೆ . ಕೇರಳದ ಕಸಾಯಿಖಾನೆಗೆ ಗೋವುಗಳನ್ನು ಸಾಗಿಸುವುದು ನಿತ್ಯ ನಿರಂತರವಾಗಿದೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದರು.

ಅಕ್ರಮ ಗೋ ಸಾಗಾಟದಲ್ಲಿ ವಶಕ್ಕೆ ಪಡೆದಿರುವ ವಾಹನದ ನೋಂದಣಿ ಸಂಖ್ಯೆ KA-16- D-6960 ಹಾಗೂ ಆರೋಪಿಗಳಾದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಬಿನ್ನಡಿ ಗ್ರಾಮದ ಅಶ್ವಥ್ ಮತ್ತು ಬಿನ್ನಡಿ ಗ್ರಾಮದ ಸಚಿನ್ ಬಂಧಿತ ಆರೋಪಿಗಳು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ

Suddi Udaya

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಜೀವ ಜಲ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 79 ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ: ಜ. 15 ರಂದು ಬಂಗೇರ ಬ್ರಿಗೇಡ್ ನಿಂದ ಮದ್ದಡ್ಕ ಬಂಡಿಮಠ ಮೈದಾನದಲ್ಲಿ ಪಂದ್ಯಕೂಟ ಆಯೋಜನೆ: ಬಂಗೇರ ಬ್ರಿಗೇಡ್ ಗೌರವಾಧ್ಯಕ್ಷೆ ಪ್ರೀತಿತಾ ಬಂಗೇರರವರಿಂದ ಪತ್ರಿಕಾಗೋಷ್ಠಿ

Suddi Udaya

ಅ.22 : ಉಜಿರೆ ಗ್ರಾ.ಪಂ.ನಲ್ಲಿ ಅಣಬೆ ಬೇಸಾಯದ ತರಬೇತಿ

Suddi Udaya
error: Content is protected !!