23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

ಬೆಳ್ತಂಗಡಿ : ಯುಗಾದಿ ನವ ಪಲ್ಲವಕೆ ನಾಂದಿ ತಂಡದಿಂದ ಅ.20 ರಂದು ಧರ್ಮಸ್ಥಳದ ಗ್ರಾ.ಪಂ ಸಮುದಾಯ ಭವನ (ನೇತ್ರಾವತಿ ಸಭಾಂಗಣ)ದಲ್ಲಿ ಸ್ನೇಹಕೂಟ ನಡೆಯಲಿರುವುದು.

ಸ್ನೇಹಕೂಟದ ಉದ್ಘಾಟನೆಯನ್ನು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ವಿಜಯ ಕುಮಾರ್ ಜೈನ್ ಅಳದಂಗಡಿ ನೆರವೇರಿಸಲಿದ್ದಾರೆ. ಹಿರಿಯ ಸಾಹಿತಿಗಳಾದ, ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಶ್ಯಾಮಲಾ ಗೋಪಿನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶೇಷ ಉಪಸ್ಥಿತಿ ಹಿರಿಯ ಸಾಹಿತಿಗಳಾದ ಪೆರ್ಮುಖ ಸುಬ್ರಹ್ಮಣ್ಯ ಭಟ್, ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿಗಳಾದ ಶ್ರೀಮತಿ ಕಲಾವತಿ ಪ್ರಕಾಶ್, ಶರಣ ಬಸಪ್ಪ ಕುಂಬಾರ್,ಶ್ರೀಮತಿ ಡಾ.ಶ್ವೇತಾ ಪ್ರಕಾಶ್, ಹೆಚ್.ಡಿ.ದಿವಾಕರ್, ಭಾಗವಹಿಸಲಿದ್ದಾರೆ.

ಶ್ರೀಮತಿ ಜ್ಞಾನೇಶ್ವರಿ ಉಡುಪ ಮತ್ತು ಶ್ರೀಮತಿ ಸೌಮ್ಯ ಗುರು ಕಾರ್ಲೆ ಯುಗಾದಿ ಧ್ಯೇಯ ಗೀತೆ ಗಾಯನ ಮಾಡಲಿದ್ದಾರೆ.


ಈ ಸಂದರ್ಭದಲ್ಲಿ ಹಲವಾರು ಸಾಹಿತಿಗಳ ಕೃತಿಗಳು ಲೋಕಾರ್ಪಣೆಗೊಳ್ಳಲಿವೆ. ಸಮಾರಂಭದ ವ್ಯವಸ್ಥಾಪಕರಾದ
ಬೆಳ್ತಂಗಡಿ ತಾಲೂಕಿನ ಆಶಾ ಅಡೂರ್, ಶ್ರೀಮತಿ ಶ್ರೀಲತಾ ಭಾರ್ಗವ,ಶ್ರೀಮತಿ ವೀಣಾ ಉಮೇಶ್,ಶ್ರೀಮತಿ ಸುಜಾತ ಭಟ್, ಕಾರ್ಯಕ್ರಮಕ್ಕೆ ವಿಶೇಷ ಸಹಕಾರ ನೀಡಲಿದ್ದಾರೆ. ಆಡಳಿತ ಮಂಡಳಿಯ ಎಂದು ಯುಗಾದಿ ನವ ಪಲ್ಲವಕೆ ನಾಂದಿ ಆಡಳಿತ ಮಂಡಳಿಯ ಶ್ರೀನಾಗ್ ಪಿ.ಎಸ್.ಹೊನ್ನಾವರ ತಿಳಿಸಿದ್ದಾರೆ.

Related posts

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya

ಗೇರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ

Suddi Udaya

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆ: ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ಮೂಲ ಸೌಕರ್ಯ ಒದಗಿಸುವ ಭರವಸೆ : ” ಸುದ್ದಿ ಉದಯ” ಸ್ಪೆಷಲ್ ರಿಪೋರ್ಟ್ ಇಫೇಕ್ಟ್

Suddi Udaya

ಸೌಜನ್ಯ ಸಾವು ಪ್ರಕರಣ: ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಲಿ: ಡಾ. ಹೆಗ್ಗಡೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
error: Content is protected !!