25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

ಪೆರಾಡಿ ಬದ್ರಿಯಾ ಜುಮ್ಮಾ ಮಸೀದಿಗೊಳಪಟ್ಟ ಜಮಾಅತ್ ನ ನೂತನ ಖಾಝಿಯಾಗಿ ಜಿಲ್ಲಾ ಖಾಝಿಯಾಗಿರುವ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಅವರು ಅ. 18ರಂದು ಜುಮ್ಮಾ ನಮಾಝ್ ಬಳಿಕ ಮಸೀದಿಯಲ್ಲಿ ನಡೆದ ಖಾಝಿ ಸ್ವೀಕಾರ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.


ಸಾಲ್ಮರ ಸಯ್ಯಿದ್ ಶರಫುದ್ದೀನ್ ತಂಙಳ್ ಅವರು ತ್ವಾಖಾ ಉಸ್ತಾದ್ ಅವರಿಗೆ ಖಾಝಿ ಪಟ್ಟ ನೀಡಿದರು.

ಮಸೀದಿ ಕಮಿಟಿ ಅಧ್ಯಕ್ಷ ಸಲಾಮ್ ಮರೋಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಯ್ಯಿದ್ ಅಕ್ರಮ್ ಅಲೀ ತಂಙಳ್ ಅಂಗರಕರ್ಯ, ಸಮದ್ ಹಾಜಿ,ಅದ್ದು ಹಾಜಿ, ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಉಪಾಧ್ಯಕ್ಷ ಫಕೀರಬ್ಬ ಮಾಸ್ಟರ್, ಜಲೀಲ್ ಪಿ.ಎ,ಅಝೀಝ್ ಫೈಝಿ ನಂದಾವರ, ಶಾಹುಲ್ ತಂಙಳ್, ರಶೀದ್ ಹಾಜಿ,ಸುಲೈಮಾನ್ ಸ ಅದಿ ಹೊಸ್ಮಾರ್,ಡಿ.ಎ.ಉಸ್ಮಾನ್ ಹಾಜಿ ಏರ್ ಇಂಡಿಯಾ, ಹಾಸ್ಕೊ ಅಬ್ದುಲ್ ರಹ್ಮಾನ್ ಹಾಜಿ,ಪೆರಾಡಿ ಸೊಸೈಟಿ ಬ್ಯಾಂಕ್ ಪ್ರಬಂಧಕ ಶೇಖ್ ಲತೀಫ್, ಅಖೀಝ್ ಮಾಲಿಕ್,ವಾಲ್ಪಾಡಿ ಮಸೀದಿಯ ಖತೀಬರಾದ ಅಬ್ಬಾಸ್ ಫೈಝಿ ದಿಡುಪೆ,ವಾಲ್ಪಾಡಿ ಮಸೀದಿ ಕಮಿಟಿ ಅಧ್ಯಕ್ಷ ಶರೀಫ್ ಎಂ.ಎಂ, ಅಶ್ರಫ್ ಮರೋಡಿ, ಎಂ.ಜಿ.ಮುಹಮ್ಮದ್ ತೋಡಾರ್ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ವಕ್ಫ್ ಸಮಿತಿಯ ಉಪಾಧ್ಯಕ್ಷ ಫಕೀರಬ್ಬ ಮಾಸ್ಟರ್, ಶೇಖ್ ಲತೀಫ್ ಹಾಗೂ ಅಝೀಝ್ ಬಿ.ಸಿ.ರೋಡ್ ಅವರನ್ನು ಸನ್ಮಾನಿಸಲಾಯಿತು.
ಮಸೀದಿಯ ಖತೀಬರಾದ ಸಫ್ವಾನ್ ಬಾಖವಿ ಮಾಪಾಲ್ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮುಅಝ್ಝಿನ್ ಅಬ್ದುರ್ರಹ್ಮಾನ್ ಫೈಝಿ ವಂದಿಸಿದರು. ‌ಸಲಾಮ್ ಮರೋಡಿ ಖಾಝಿ ಅವರನ್ನು ಪರಿಚಯಿಸಿದರು. ಹಮೀದ್ ಸಾವ್ಯ ಸೇರಿದಂತೆ ಮಸೀದಿ ಕಮಿಟಿಯ ಪದಾಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಜ.6: ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಮಾತಾ-ಪಿತಾಗುರುದೇವೋಭವ ಕಾರ್ಯಕ್ರಮ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಅಂತರ್ ಕಾಲೇಜು ಪ.ಪೂ. ವಿದ್ಯಾರ್ಥಿಗಳ “ಯುನಿಟಸ್ 2023” : ಪ್ರಸನ್ನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya

ಮಾ.6 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!