ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮವು ಅ. 19ರಂದು ಬೆಳ್ತಂಗಡಿ ಧರ್ಮಸ್ಥಳ ಮಂಜುನಾಥ ಭವನದಲ್ಲಿ ನಡೆಯಿತು.

ಬಿಸಿ ವಿಭಾಗದ ನಿರ್ದೇಶಕ ಪ್ರವೀಣ್ ಕುಮಾರ್ ಎಮ್.ಸಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇಶದ ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಬೇಕಾದಂತಹ ಕಾರ್ಯಕ್ರಮಗಳನ್ನು ಒಂದೇ ಸೂರಿನೆಡೆಗೆ ತಂದಂತಹ ಸಂಸ್ಥೆ. ಜನ ಸಂಘಟಿತವಾದರೆ ಆರ್ಥಿಕ, ಸಾಮಾಜಿಕವಾಗಿ ಹಾಗೂ ಎಲ್ಲಾ ರೀತಿಯಲ್ಲೂ ಅಭಿವೃದ್ಧಿ ಹೊಂದಲು ಸಾಧ್ಯ. ಗ್ರಾಮಾಭಿವೃದ್ಧಿ ಮೈಕ್ರೋ ಫೈನಾನ್ಸ್ ಅಲ್ಲ. ಗ್ರಾಮಾಭಿವೃದ್ಧಿ ಜನರಿಗೆ ಸಾಲ ಪಡೆದುಕೊಳ್ಳುವಂತಹ ಅರ್ಹತೆಯನ್ನು ಕಲ್ಪಿಸಿಕೊಡುತ್ತದೆ. ಗ್ರಾಮಾಭಿವೃದ್ಧಿ ಯೋಜನೆ ಸ್ವ ಸಹಾಯ ಸಂಘಗಳ ವ್ಯವಸ್ಥೆ ದೇಶಕ್ಕೆ ಮಾದರಿ ಎಂದು ಹೇಳಿದರು.

ವೇದಿಕೆಯಲ್ಲಿ ಬೆಳ್ತಂಗಡಿ ಎಸ್ ಬಿ ಐ ಬ್ಯಾಂಕ್ ನ ಮುಖ್ಯ ವ್ಯವಸ್ಥಾಪಕ ಪದ್ಮನಾಭ ನಾಯ್ಕ್, ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ್ , ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಜಿಲ್ಲಾ ಎಂ.ಐ.ಎಸ್ ಯೋಜನಾಧಿಕಾರಿ ಪ್ರೇಮನಾಥ, ವಲಯ ಅಧ್ಯಕ್ಷರಾದ ಸೇಸಪ್ಪ ಮೂಲ್ಯ, ರಾಜೇಶ್ , ಉಮಾರ್, ಅಬ್ದುಲ್ ರಝಕ್, ವಿಜಯ್, ಸತೀಶ್, ಚಂದ್ರಶೇಖರ್, ಸೀತಾರಾಮ್ ಉಪಸ್ಥಿತರಿದ್ದರು.

ತಾಲೂಕು ಯೋಜನಾಧಿಕಾರಿ ಸುರೇಂದ್ರ ಕುಮಾರ್ ಸ್ವಾಗತಿಸಿದರು. ಬೆಳ್ತಂಗಡಿ ಕೃಷಿ ಅಧಿಕಾರಿ ರಾಮ್ ಕುಮಾರ್ ನಿರೂಪಿಸಿದರು. ಶ್ರೀಮತಿ ಮಧುರಾ ಪ್ರಾರ್ಥಿಸಿ, ಧನ್ಯವಾದವಿತ್ತರು.

Related posts

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ /ದುಗಾ೯ದೇವಿ ದೇವಸ್ಥಾನದಲ್ಲಿ ಮನೆ-ಮನೆಯಿಂದ ಅಡಕೆ ಸಂಗ್ರಹಣಾ ಅಭಿಯಾನ, ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನೆ ಹಾಗೂ ದೇವಸ್ಥಾನದ ಮುಖ ಮಂಟಪದ ಶಿಲಾನ್ಯಾಸ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

Suddi Udaya

ಜ.10- 12: ಜಮಲಾಬಾದ್ ಹಯಾತುಲ್ ಅವುಲಿಯಾ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya
error: Content is protected !!