39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು


ಬೆಳ್ತಂಗಡಿ: ಭಜನೆಗೆ ಬರುವಂತಹ ಮಾತೆಯರನ್ನು ಹಾಗೂ ಸಹೋದರಿಯರನ್ನು ಮತ್ತು ಪುಟಾಣಿಗಳನ್ನು ನಮ್ಮ ಸಮಾಜವು ಅತ್ಯಂತ ಗೌರವದಿಂದ ನೋಡಿಕೊಳ್ಳುತ್ತಿದೆ.

ಇಂತಹ ಸಂದರ್ಭದಲ್ಲಿ ಭಜನೆಗೆ ಜಾತಿಯ ಬಣ್ಣವಿಲ್ಲ ಭಜನೆಯಿಂದ ವಿಭಜನೆ ಇಲ್ಲ ಎನ್ನುವುದನ್ನು ಮರೆತು ಧಾರ್ಮಿಕ ಸಂಘಟನೆಗಳ ಬಗ್ಗೆ ಮತ್ತು ಒಂದು ಸಮುದಾಯವನ್ನು ಗುರಿಯಾಗಿರಿಸಿ ಭಜನೆಗೆ ಬರುವಂತಹ ಹೆಣ್ಣು ಮಕ್ಕಳನ್ನು ಸಮಾಜವು ಅಪಹಸ್ಯದಿಂದ ನೋಡುವಂತಹ ಮಾನಹಾನಿಕರ ಹೇಳಿಕೆ ನೀಡಿ ಮಹಿಳೆಯರಿಗೆ ಅವಮಾನ ಮಾಡಿರುವುದನ್ನು ಖಂಡಿಸುವುದು ಮಾತ್ರವಲ್ಲದೆ ಪದೇ ಪದೇ ಭಜನೆಯ ಹಾಗೂ ಮಹಿಳೆಯರ ಬಗ್ಗೆ ತಪ್ಪು ಹೇಳಿಕೆಗಳನ್ನು ನೀಡಿ ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆದು ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡಲು ಭಜಕರು ಶ್ರದ್ಧಾ ಭಕ್ತಿಯಿಂದ ಮಾಡುತ್ತಿರುವ ಭಜನೆಗೆ ಭಂಗ ತರಲು ಪ್ರಯತ್ನಿಸುತ್ತಿರುವ ಅರಣ್ಯಾಧಿಕಾರಿ ಸಂಜೀವ ಪೂಜಾರಿಯಿಂದ ಮುಚ್ಚಳಿಕೆಯನ್ನು ಬರೆಸಿಕೊಂಡು ಅವರನ್ನು ಅಮಾನತು ಮಾಡಬೇಕು.

ಇಲ್ಲದೆ ಹೋದಲ್ಲಿ ಮುಂದಕ್ಕೆಯು ಇವರು ನೀಡುವಂತ ಅನಗತ್ಯ ಆತಂಕಕಾರಿ ಹೇಳಿಕೆಯಿಂದ ಸಮಾಜದಲ್ಲಿ ಗೊಂದಲಮಯ ವಾತಾವರಣ ನಿರ್ಮಾಣವಾಗಬಹುದು ಎಂದು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ಇದರ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ , ಉಪಾಧ್ಯಕ್ಷ ರಾಜೇಂದ್ರ ಬಸ್ರೂರು ಕುಂದಾಪುರ, ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ವೆಂಕಟೇಶ್ವರ ಭಟ್ ಕಜೆ, ಉಪಾಧ್ಯಕ್ಷ ಜಯಪ್ರಸಾದ್ ಕಡಮ್ಮಜೆ, ಕರಾಯ ವಲಯದ ಸಂಯೋಜಕರಾದ ರಾಜಶೇಖರ್ ಕರಾಯ ಮೊದಲಾದವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸುತ್ತಾರೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya
error: Content is protected !!