25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು


ಬೆಳ್ತಂಗಡಿ: ಭಜನೆಗೆ ಬರುವಂತಹ ಮಾತೆಯರನ್ನು ಹಾಗೂ ಸಹೋದರಿಯರನ್ನು ಮತ್ತು ಪುಟಾಣಿಗಳನ್ನು ನಮ್ಮ ಸಮಾಜವು ಅತ್ಯಂತ ಗೌರವದಿಂದ ನೋಡಿಕೊಳ್ಳುತ್ತಿದೆ.

ಇಂತಹ ಸಂದರ್ಭದಲ್ಲಿ ಭಜನೆಗೆ ಜಾತಿಯ ಬಣ್ಣವಿಲ್ಲ ಭಜನೆಯಿಂದ ವಿಭಜನೆ ಇಲ್ಲ ಎನ್ನುವುದನ್ನು ಮರೆತು ಧಾರ್ಮಿಕ ಸಂಘಟನೆಗಳ ಬಗ್ಗೆ ಮತ್ತು ಒಂದು ಸಮುದಾಯವನ್ನು ಗುರಿಯಾಗಿರಿಸಿ ಭಜನೆಗೆ ಬರುವಂತಹ ಹೆಣ್ಣು ಮಕ್ಕಳನ್ನು ಸಮಾಜವು ಅಪಹಸ್ಯದಿಂದ ನೋಡುವಂತಹ ಮಾನಹಾನಿಕರ ಹೇಳಿಕೆ ನೀಡಿ ಮಹಿಳೆಯರಿಗೆ ಅವಮಾನ ಮಾಡಿರುವುದನ್ನು ಖಂಡಿಸುವುದು ಮಾತ್ರವಲ್ಲದೆ ಪದೇ ಪದೇ ಭಜನೆಯ ಹಾಗೂ ಮಹಿಳೆಯರ ಬಗ್ಗೆ ತಪ್ಪು ಹೇಳಿಕೆಗಳನ್ನು ನೀಡಿ ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆದು ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡಲು ಭಜಕರು ಶ್ರದ್ಧಾ ಭಕ್ತಿಯಿಂದ ಮಾಡುತ್ತಿರುವ ಭಜನೆಗೆ ಭಂಗ ತರಲು ಪ್ರಯತ್ನಿಸುತ್ತಿರುವ ಅರಣ್ಯಾಧಿಕಾರಿ ಸಂಜೀವ ಪೂಜಾರಿಯಿಂದ ಮುಚ್ಚಳಿಕೆಯನ್ನು ಬರೆಸಿಕೊಂಡು ಅವರನ್ನು ಅಮಾನತು ಮಾಡಬೇಕು.

ಇಲ್ಲದೆ ಹೋದಲ್ಲಿ ಮುಂದಕ್ಕೆಯು ಇವರು ನೀಡುವಂತ ಅನಗತ್ಯ ಆತಂಕಕಾರಿ ಹೇಳಿಕೆಯಿಂದ ಸಮಾಜದಲ್ಲಿ ಗೊಂದಲಮಯ ವಾತಾವರಣ ನಿರ್ಮಾಣವಾಗಬಹುದು ಎಂದು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ಇದರ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ , ಉಪಾಧ್ಯಕ್ಷ ರಾಜೇಂದ್ರ ಬಸ್ರೂರು ಕುಂದಾಪುರ, ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ವೆಂಕಟೇಶ್ವರ ಭಟ್ ಕಜೆ, ಉಪಾಧ್ಯಕ್ಷ ಜಯಪ್ರಸಾದ್ ಕಡಮ್ಮಜೆ, ಕರಾಯ ವಲಯದ ಸಂಯೋಜಕರಾದ ರಾಜಶೇಖರ್ ಕರಾಯ ಮೊದಲಾದವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸುತ್ತಾರೆ.

Related posts

ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಭೆ

Suddi Udaya

ಮೈರೋಳ್ತಡ್ಕ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ ನವೀಕರಣಗೊಂಡ ಮಹಿಳಾ ಚಿಕಿತ್ಸಾ ವಿಭಾಗ “ಸಿಂದೂರ”ಲೋಕಾರ್ಪಣೆ

Suddi Udaya

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

Suddi Udaya
error: Content is protected !!