July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು


ಬೆಳ್ತಂಗಡಿ: ಭಜನೆಗೆ ಬರುವಂತಹ ಮಾತೆಯರನ್ನು ಹಾಗೂ ಸಹೋದರಿಯರನ್ನು ಮತ್ತು ಪುಟಾಣಿಗಳನ್ನು ನಮ್ಮ ಸಮಾಜವು ಅತ್ಯಂತ ಗೌರವದಿಂದ ನೋಡಿಕೊಳ್ಳುತ್ತಿದೆ.

ಇಂತಹ ಸಂದರ್ಭದಲ್ಲಿ ಭಜನೆಗೆ ಜಾತಿಯ ಬಣ್ಣವಿಲ್ಲ ಭಜನೆಯಿಂದ ವಿಭಜನೆ ಇಲ್ಲ ಎನ್ನುವುದನ್ನು ಮರೆತು ಧಾರ್ಮಿಕ ಸಂಘಟನೆಗಳ ಬಗ್ಗೆ ಮತ್ತು ಒಂದು ಸಮುದಾಯವನ್ನು ಗುರಿಯಾಗಿರಿಸಿ ಭಜನೆಗೆ ಬರುವಂತಹ ಹೆಣ್ಣು ಮಕ್ಕಳನ್ನು ಸಮಾಜವು ಅಪಹಸ್ಯದಿಂದ ನೋಡುವಂತಹ ಮಾನಹಾನಿಕರ ಹೇಳಿಕೆ ನೀಡಿ ಮಹಿಳೆಯರಿಗೆ ಅವಮಾನ ಮಾಡಿರುವುದನ್ನು ಖಂಡಿಸುವುದು ಮಾತ್ರವಲ್ಲದೆ ಪದೇ ಪದೇ ಭಜನೆಯ ಹಾಗೂ ಮಹಿಳೆಯರ ಬಗ್ಗೆ ತಪ್ಪು ಹೇಳಿಕೆಗಳನ್ನು ನೀಡಿ ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆದು ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡಲು ಭಜಕರು ಶ್ರದ್ಧಾ ಭಕ್ತಿಯಿಂದ ಮಾಡುತ್ತಿರುವ ಭಜನೆಗೆ ಭಂಗ ತರಲು ಪ್ರಯತ್ನಿಸುತ್ತಿರುವ ಅರಣ್ಯಾಧಿಕಾರಿ ಸಂಜೀವ ಪೂಜಾರಿಯಿಂದ ಮುಚ್ಚಳಿಕೆಯನ್ನು ಬರೆಸಿಕೊಂಡು ಅವರನ್ನು ಅಮಾನತು ಮಾಡಬೇಕು.

ಇಲ್ಲದೆ ಹೋದಲ್ಲಿ ಮುಂದಕ್ಕೆಯು ಇವರು ನೀಡುವಂತ ಅನಗತ್ಯ ಆತಂಕಕಾರಿ ಹೇಳಿಕೆಯಿಂದ ಸಮಾಜದಲ್ಲಿ ಗೊಂದಲಮಯ ವಾತಾವರಣ ನಿರ್ಮಾಣವಾಗಬಹುದು ಎಂದು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ಇದರ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ , ಉಪಾಧ್ಯಕ್ಷ ರಾಜೇಂದ್ರ ಬಸ್ರೂರು ಕುಂದಾಪುರ, ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ವೆಂಕಟೇಶ್ವರ ಭಟ್ ಕಜೆ, ಉಪಾಧ್ಯಕ್ಷ ಜಯಪ್ರಸಾದ್ ಕಡಮ್ಮಜೆ, ಕರಾಯ ವಲಯದ ಸಂಯೋಜಕರಾದ ರಾಜಶೇಖರ್ ಕರಾಯ ಮೊದಲಾದವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸುತ್ತಾರೆ.

Related posts

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬಾರ್ಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಸೀಯಾಳ ಅಭಿಷೇಕ

Suddi Udaya

ಮೊಗ್ರು: ಯುವ ಕೃಷಿಕ ದೇವಿಪ್ರಸಾದ್ ಗೌಡ ಕಡಮ್ಮಾಜೆ ರವರಿಗೆ “ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿ”

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ತರಗತಿಗಳ ಉದ್ಘಾಟನೆ

Suddi Udaya

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ನೋಂದಾವಣಿ ಆರಂಭ: ಒಂದೇ ಸೂರಿನಡಿಯಲ್ಲಿ ವಿವಿಧ ವಿದ್ಯೆಗಳನ್ನು ಕಲಿಯುವ ಸುವರ್ಣಾವಕಾಶ

Suddi Udaya

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya
error: Content is protected !!