25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು


ಬೆಳ್ತಂಗಡಿ: ಭಜನೆಗೆ ಬರುವಂತಹ ಮಾತೆಯರನ್ನು ಹಾಗೂ ಸಹೋದರಿಯರನ್ನು ಮತ್ತು ಪುಟಾಣಿಗಳನ್ನು ನಮ್ಮ ಸಮಾಜವು ಅತ್ಯಂತ ಗೌರವದಿಂದ ನೋಡಿಕೊಳ್ಳುತ್ತಿದೆ.

ಇಂತಹ ಸಂದರ್ಭದಲ್ಲಿ ಭಜನೆಗೆ ಜಾತಿಯ ಬಣ್ಣವಿಲ್ಲ ಭಜನೆಯಿಂದ ವಿಭಜನೆ ಇಲ್ಲ ಎನ್ನುವುದನ್ನು ಮರೆತು ಧಾರ್ಮಿಕ ಸಂಘಟನೆಗಳ ಬಗ್ಗೆ ಮತ್ತು ಒಂದು ಸಮುದಾಯವನ್ನು ಗುರಿಯಾಗಿರಿಸಿ ಭಜನೆಗೆ ಬರುವಂತಹ ಹೆಣ್ಣು ಮಕ್ಕಳನ್ನು ಸಮಾಜವು ಅಪಹಸ್ಯದಿಂದ ನೋಡುವಂತಹ ಮಾನಹಾನಿಕರ ಹೇಳಿಕೆ ನೀಡಿ ಮಹಿಳೆಯರಿಗೆ ಅವಮಾನ ಮಾಡಿರುವುದನ್ನು ಖಂಡಿಸುವುದು ಮಾತ್ರವಲ್ಲದೆ ಪದೇ ಪದೇ ಭಜನೆಯ ಹಾಗೂ ಮಹಿಳೆಯರ ಬಗ್ಗೆ ತಪ್ಪು ಹೇಳಿಕೆಗಳನ್ನು ನೀಡಿ ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆದು ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡಲು ಭಜಕರು ಶ್ರದ್ಧಾ ಭಕ್ತಿಯಿಂದ ಮಾಡುತ್ತಿರುವ ಭಜನೆಗೆ ಭಂಗ ತರಲು ಪ್ರಯತ್ನಿಸುತ್ತಿರುವ ಅರಣ್ಯಾಧಿಕಾರಿ ಸಂಜೀವ ಪೂಜಾರಿಯಿಂದ ಮುಚ್ಚಳಿಕೆಯನ್ನು ಬರೆಸಿಕೊಂಡು ಅವರನ್ನು ಅಮಾನತು ಮಾಡಬೇಕು.

ಇಲ್ಲದೆ ಹೋದಲ್ಲಿ ಮುಂದಕ್ಕೆಯು ಇವರು ನೀಡುವಂತ ಅನಗತ್ಯ ಆತಂಕಕಾರಿ ಹೇಳಿಕೆಯಿಂದ ಸಮಾಜದಲ್ಲಿ ಗೊಂದಲಮಯ ವಾತಾವರಣ ನಿರ್ಮಾಣವಾಗಬಹುದು ಎಂದು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ಇದರ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ , ಉಪಾಧ್ಯಕ್ಷ ರಾಜೇಂದ್ರ ಬಸ್ರೂರು ಕುಂದಾಪುರ, ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ವೆಂಕಟೇಶ್ವರ ಭಟ್ ಕಜೆ, ಉಪಾಧ್ಯಕ್ಷ ಜಯಪ್ರಸಾದ್ ಕಡಮ್ಮಜೆ, ಕರಾಯ ವಲಯದ ಸಂಯೋಜಕರಾದ ರಾಜಶೇಖರ್ ಕರಾಯ ಮೊದಲಾದವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸುತ್ತಾರೆ.

Related posts

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರ ಲೋಕಾರ್ಪಣೆ: ರೂ 11 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮಹಾದ್ವಾರ, ಶಾಸಕ ಹರೀಶ್ ಪೂಂಜರವರಿಂದ ಉದ್ಘಾಟನೆ

Suddi Udaya
error: Content is protected !!