24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

ಬೆಳ್ತಂಗಡಿ : ಯುಗಾದಿ ನವ ಪಲ್ಲವಕೆ ನಾಂದಿ ತಂಡದಿಂದ ಅ.20 ರಂದು ಧರ್ಮಸ್ಥಳದ ಗ್ರಾ.ಪಂ ಸಮುದಾಯ ಭವನ (ನೇತ್ರಾವತಿ ಸಭಾಂಗಣ)ದಲ್ಲಿ ಸ್ನೇಹಕೂಟ ನಡೆಯಲಿರುವುದು.

ಸ್ನೇಹಕೂಟದ ಉದ್ಘಾಟನೆಯನ್ನು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ವಿಜಯ ಕುಮಾರ್ ಜೈನ್ ಅಳದಂಗಡಿ ನೆರವೇರಿಸಲಿದ್ದಾರೆ. ಹಿರಿಯ ಸಾಹಿತಿಗಳಾದ, ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಶ್ಯಾಮಲಾ ಗೋಪಿನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶೇಷ ಉಪಸ್ಥಿತಿ ಹಿರಿಯ ಸಾಹಿತಿಗಳಾದ ಪೆರ್ಮುಖ ಸುಬ್ರಹ್ಮಣ್ಯ ಭಟ್, ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿಗಳಾದ ಶ್ರೀಮತಿ ಕಲಾವತಿ ಪ್ರಕಾಶ್, ಶರಣ ಬಸಪ್ಪ ಕುಂಬಾರ್,ಶ್ರೀಮತಿ ಡಾ.ಶ್ವೇತಾ ಪ್ರಕಾಶ್, ಹೆಚ್.ಡಿ.ದಿವಾಕರ್, ಭಾಗವಹಿಸಲಿದ್ದಾರೆ.

ಶ್ರೀಮತಿ ಜ್ಞಾನೇಶ್ವರಿ ಉಡುಪ ಮತ್ತು ಶ್ರೀಮತಿ ಸೌಮ್ಯ ಗುರು ಕಾರ್ಲೆ ಯುಗಾದಿ ಧ್ಯೇಯ ಗೀತೆ ಗಾಯನ ಮಾಡಲಿದ್ದಾರೆ.


ಈ ಸಂದರ್ಭದಲ್ಲಿ ಹಲವಾರು ಸಾಹಿತಿಗಳ ಕೃತಿಗಳು ಲೋಕಾರ್ಪಣೆಗೊಳ್ಳಲಿವೆ. ಸಮಾರಂಭದ ವ್ಯವಸ್ಥಾಪಕರಾದ
ಬೆಳ್ತಂಗಡಿ ತಾಲೂಕಿನ ಆಶಾ ಅಡೂರ್, ಶ್ರೀಮತಿ ಶ್ರೀಲತಾ ಭಾರ್ಗವ,ಶ್ರೀಮತಿ ವೀಣಾ ಉಮೇಶ್,ಶ್ರೀಮತಿ ಸುಜಾತ ಭಟ್, ಕಾರ್ಯಕ್ರಮಕ್ಕೆ ವಿಶೇಷ ಸಹಕಾರ ನೀಡಲಿದ್ದಾರೆ. ಆಡಳಿತ ಮಂಡಳಿಯ ಎಂದು ಯುಗಾದಿ ನವ ಪಲ್ಲವಕೆ ನಾಂದಿ ಆಡಳಿತ ಮಂಡಳಿಯ ಶ್ರೀನಾಗ್ ಪಿ.ಎಸ್.ಹೊನ್ನಾವರ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಹಾಯಧನ ವಿತರಣೆ

Suddi Udaya

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಕೊಕ್ಕಡ: ಸೌತಡ್ಕ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ, ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ

Suddi Udaya

ಜು.23 ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya

ತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷ ದ್ವಿತೀಯ ಸ್ಥಾನ

Suddi Udaya
error: Content is protected !!