24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

ಬೆಳ್ತಂಗಡಿ : ಯುಗಾದಿ ನವ ಪಲ್ಲವಕೆ ನಾಂದಿ ತಂಡದಿಂದ ಅ.20 ರಂದು ಧರ್ಮಸ್ಥಳದ ಗ್ರಾ.ಪಂ ಸಮುದಾಯ ಭವನ (ನೇತ್ರಾವತಿ ಸಭಾಂಗಣ)ದಲ್ಲಿ ಸ್ನೇಹಕೂಟ ನಡೆಯಲಿರುವುದು.

ಸ್ನೇಹಕೂಟದ ಉದ್ಘಾಟನೆಯನ್ನು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ವಿಜಯ ಕುಮಾರ್ ಜೈನ್ ಅಳದಂಗಡಿ ನೆರವೇರಿಸಲಿದ್ದಾರೆ. ಹಿರಿಯ ಸಾಹಿತಿಗಳಾದ, ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಶ್ಯಾಮಲಾ ಗೋಪಿನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶೇಷ ಉಪಸ್ಥಿತಿ ಹಿರಿಯ ಸಾಹಿತಿಗಳಾದ ಪೆರ್ಮುಖ ಸುಬ್ರಹ್ಮಣ್ಯ ಭಟ್, ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿಗಳಾದ ಶ್ರೀಮತಿ ಕಲಾವತಿ ಪ್ರಕಾಶ್, ಶರಣ ಬಸಪ್ಪ ಕುಂಬಾರ್,ಶ್ರೀಮತಿ ಡಾ.ಶ್ವೇತಾ ಪ್ರಕಾಶ್, ಹೆಚ್.ಡಿ.ದಿವಾಕರ್, ಭಾಗವಹಿಸಲಿದ್ದಾರೆ.

ಶ್ರೀಮತಿ ಜ್ಞಾನೇಶ್ವರಿ ಉಡುಪ ಮತ್ತು ಶ್ರೀಮತಿ ಸೌಮ್ಯ ಗುರು ಕಾರ್ಲೆ ಯುಗಾದಿ ಧ್ಯೇಯ ಗೀತೆ ಗಾಯನ ಮಾಡಲಿದ್ದಾರೆ.


ಈ ಸಂದರ್ಭದಲ್ಲಿ ಹಲವಾರು ಸಾಹಿತಿಗಳ ಕೃತಿಗಳು ಲೋಕಾರ್ಪಣೆಗೊಳ್ಳಲಿವೆ. ಸಮಾರಂಭದ ವ್ಯವಸ್ಥಾಪಕರಾದ
ಬೆಳ್ತಂಗಡಿ ತಾಲೂಕಿನ ಆಶಾ ಅಡೂರ್, ಶ್ರೀಮತಿ ಶ್ರೀಲತಾ ಭಾರ್ಗವ,ಶ್ರೀಮತಿ ವೀಣಾ ಉಮೇಶ್,ಶ್ರೀಮತಿ ಸುಜಾತ ಭಟ್, ಕಾರ್ಯಕ್ರಮಕ್ಕೆ ವಿಶೇಷ ಸಹಕಾರ ನೀಡಲಿದ್ದಾರೆ. ಆಡಳಿತ ಮಂಡಳಿಯ ಎಂದು ಯುಗಾದಿ ನವ ಪಲ್ಲವಕೆ ನಾಂದಿ ಆಡಳಿತ ಮಂಡಳಿಯ ಶ್ರೀನಾಗ್ ಪಿ.ಎಸ್.ಹೊನ್ನಾವರ ತಿಳಿಸಿದ್ದಾರೆ.

Related posts

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಳೆಂಜ: ಶ್ರೀ ದುರ್ಗಾ ಮಹಿಳಾ ಮಂಡಳಿ ವತಿಯಿಂದ ಉಚಿತ ಟೈಲರಿಂಗ್ ಶಿಬಿರ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಅಹ್ವಾನ

Suddi Udaya

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya
error: Content is protected !!