September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಚಿಕ್ಕಮಗಳೂರಿನ ಕೊಟ್ಟಿಗೆರೆಯಿಂದ ವಿಟ್ಲ ತಾಲೂಕಿನ ಸಾಲೆತ್ತೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಹೋರಿ ಮತ್ತು ಒಂದು ಗೋವುವನ್ನು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸುವ ಮೂಲಕ ಗುರುವಾಯನಕೆರೆ ಹಾಗೂ ವಿಟ್ಲ ತಾಲೂಕಿನ ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ರಕ್ಷಣೆ ಮಾಡಲಾಗಿದ್ದು ಈ ಘಟನೆಯು ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ಅ.18 ರಂದು ನಡೆದಿದೆ.

ವಶಕ್ಕೆ ಪಡೆದಿರುವ ಹೋರಿ ಹಾಗೂ ಗೋವು ಗಳನ್ನು ಸಾಲೆತ್ತೂರಿನ ಅನ್ಯಕೋಮಿನ ವ್ಯಕ್ತಿಯೊಬ್ಬರಿಗೆ ಸೇರಿರುವುದಾಗಿದೆ.

ಕರ್ನಾಟಕದ ಬೇರೆ ಬೇರೆ ಪ್ರದೇಶದಿಂದ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿರುವ ಒಂದು ಮಾಫಿಯಾ ಸಾಲೆತ್ತೂರಿನಲ್ಲಿ ಕೆಲಸ ಮಾಡುತ್ತಿದೆ ಎಂದು ಹಿಂದು ಕಾರ್ಯಕರ್ತರು ತಿಳಿಸಿದ್ದಾರೆ . ಕೇರಳದ ಕಸಾಯಿಖಾನೆಗೆ ಗೋವುಗಳನ್ನು ಸಾಗಿಸುವುದು ನಿತ್ಯ ನಿರಂತರವಾಗಿದೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದರು.

ಅಕ್ರಮ ಗೋ ಸಾಗಾಟದಲ್ಲಿ ವಶಕ್ಕೆ ಪಡೆದಿರುವ ವಾಹನದ ನೋಂದಣಿ ಸಂಖ್ಯೆ KA-16- D-6960 ಹಾಗೂ ಆರೋಪಿಗಳಾದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಬಿನ್ನಡಿ ಗ್ರಾಮದ ಅಶ್ವಥ್ ಮತ್ತು ಬಿನ್ನಡಿ ಗ್ರಾಮದ ಸಚಿನ್ ಬಂಧಿತ ಆರೋಪಿಗಳು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya

ಸುಲ್ಕೇರಿ ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya

ಬೆಳ್ತಂಗಡಿ:ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: ರೂ. 123 ಕೋಟಿ ವ್ಯವಹಾರ, ರೂ. 50 ಲಕ್ಷ ಲಾಭ, ಶೇ.12 ಡಿವಿಡೆಂಡ್

Suddi Udaya
error: Content is protected !!