ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮವು ಅ. 19ರಂದು ಬೆಳ್ತಂಗಡಿ ಧರ್ಮಸ್ಥಳ ಮಂಜುನಾಥ ಭವನದಲ್ಲಿ ನಡೆಯಿತು.

ಬಿಸಿ ವಿಭಾಗದ ನಿರ್ದೇಶಕ ಪ್ರವೀಣ್ ಕುಮಾರ್ ಎಮ್.ಸಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇಶದ ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಬೇಕಾದಂತಹ ಕಾರ್ಯಕ್ರಮಗಳನ್ನು ಒಂದೇ ಸೂರಿನೆಡೆಗೆ ತಂದಂತಹ ಸಂಸ್ಥೆ. ಜನ ಸಂಘಟಿತವಾದರೆ ಆರ್ಥಿಕ, ಸಾಮಾಜಿಕವಾಗಿ ಹಾಗೂ ಎಲ್ಲಾ ರೀತಿಯಲ್ಲೂ ಅಭಿವೃದ್ಧಿ ಹೊಂದಲು ಸಾಧ್ಯ. ಗ್ರಾಮಾಭಿವೃದ್ಧಿ ಮೈಕ್ರೋ ಫೈನಾನ್ಸ್ ಅಲ್ಲ. ಗ್ರಾಮಾಭಿವೃದ್ಧಿ ಜನರಿಗೆ ಸಾಲ ಪಡೆದುಕೊಳ್ಳುವಂತಹ ಅರ್ಹತೆಯನ್ನು ಕಲ್ಪಿಸಿಕೊಡುತ್ತದೆ. ಗ್ರಾಮಾಭಿವೃದ್ಧಿ ಯೋಜನೆ ಸ್ವ ಸಹಾಯ ಸಂಘಗಳ ವ್ಯವಸ್ಥೆ ದೇಶಕ್ಕೆ ಮಾದರಿ ಎಂದು ಹೇಳಿದರು.

ವೇದಿಕೆಯಲ್ಲಿ ಬೆಳ್ತಂಗಡಿ ಎಸ್ ಬಿ ಐ ಬ್ಯಾಂಕ್ ನ ಮುಖ್ಯ ವ್ಯವಸ್ಥಾಪಕ ಪದ್ಮನಾಭ ನಾಯ್ಕ್, ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ್ , ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಜಿಲ್ಲಾ ಎಂ.ಐ.ಎಸ್ ಯೋಜನಾಧಿಕಾರಿ ಪ್ರೇಮನಾಥ, ವಲಯ ಅಧ್ಯಕ್ಷರಾದ ಸೇಸಪ್ಪ ಮೂಲ್ಯ, ರಾಜೇಶ್ , ಉಮಾರ್, ಅಬ್ದುಲ್ ರಝಕ್, ವಿಜಯ್, ಸತೀಶ್, ಚಂದ್ರಶೇಖರ್, ಸೀತಾರಾಮ್ ಉಪಸ್ಥಿತರಿದ್ದರು.

ತಾಲೂಕು ಯೋಜನಾಧಿಕಾರಿ ಸುರೇಂದ್ರ ಕುಮಾರ್ ಸ್ವಾಗತಿಸಿದರು. ಬೆಳ್ತಂಗಡಿ ಕೃಷಿ ಅಧಿಕಾರಿ ರಾಮ್ ಕುಮಾರ್ ನಿರೂಪಿಸಿದರು. ಶ್ರೀಮತಿ ಮಧುರಾ ಪ್ರಾರ್ಥಿಸಿ, ಧನ್ಯವಾದವಿತ್ತರು.

Related posts

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಬಜಿಲ ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ, ಪೋಷಕರಿಂದ ಮಾದರಿ ಶಾಲಾ ಕೈತೋಟ ನಿರ್ಮಾಣ

Suddi Udaya

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya
error: Content is protected !!