22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು


ಬೆಳ್ತಂಗಡಿ: ಭಜನೆಗೆ ಬರುವಂತಹ ಮಾತೆಯರನ್ನು ಹಾಗೂ ಸಹೋದರಿಯರನ್ನು ಮತ್ತು ಪುಟಾಣಿಗಳನ್ನು ನಮ್ಮ ಸಮಾಜವು ಅತ್ಯಂತ ಗೌರವದಿಂದ ನೋಡಿಕೊಳ್ಳುತ್ತಿದೆ.

ಇಂತಹ ಸಂದರ್ಭದಲ್ಲಿ ಭಜನೆಗೆ ಜಾತಿಯ ಬಣ್ಣವಿಲ್ಲ ಭಜನೆಯಿಂದ ವಿಭಜನೆ ಇಲ್ಲ ಎನ್ನುವುದನ್ನು ಮರೆತು ಧಾರ್ಮಿಕ ಸಂಘಟನೆಗಳ ಬಗ್ಗೆ ಮತ್ತು ಒಂದು ಸಮುದಾಯವನ್ನು ಗುರಿಯಾಗಿರಿಸಿ ಭಜನೆಗೆ ಬರುವಂತಹ ಹೆಣ್ಣು ಮಕ್ಕಳನ್ನು ಸಮಾಜವು ಅಪಹಸ್ಯದಿಂದ ನೋಡುವಂತಹ ಮಾನಹಾನಿಕರ ಹೇಳಿಕೆ ನೀಡಿ ಮಹಿಳೆಯರಿಗೆ ಅವಮಾನ ಮಾಡಿರುವುದನ್ನು ಖಂಡಿಸುವುದು ಮಾತ್ರವಲ್ಲದೆ ಪದೇ ಪದೇ ಭಜನೆಯ ಹಾಗೂ ಮಹಿಳೆಯರ ಬಗ್ಗೆ ತಪ್ಪು ಹೇಳಿಕೆಗಳನ್ನು ನೀಡಿ ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆದು ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡಲು ಭಜಕರು ಶ್ರದ್ಧಾ ಭಕ್ತಿಯಿಂದ ಮಾಡುತ್ತಿರುವ ಭಜನೆಗೆ ಭಂಗ ತರಲು ಪ್ರಯತ್ನಿಸುತ್ತಿರುವ ಅರಣ್ಯಾಧಿಕಾರಿ ಸಂಜೀವ ಪೂಜಾರಿಯಿಂದ ಮುಚ್ಚಳಿಕೆಯನ್ನು ಬರೆಸಿಕೊಂಡು ಅವರನ್ನು ಅಮಾನತು ಮಾಡಬೇಕು.

ಇಲ್ಲದೆ ಹೋದಲ್ಲಿ ಮುಂದಕ್ಕೆಯು ಇವರು ನೀಡುವಂತ ಅನಗತ್ಯ ಆತಂಕಕಾರಿ ಹೇಳಿಕೆಯಿಂದ ಸಮಾಜದಲ್ಲಿ ಗೊಂದಲಮಯ ವಾತಾವರಣ ನಿರ್ಮಾಣವಾಗಬಹುದು ಎಂದು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ಇದರ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ , ಉಪಾಧ್ಯಕ್ಷ ರಾಜೇಂದ್ರ ಬಸ್ರೂರು ಕುಂದಾಪುರ, ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ವೆಂಕಟೇಶ್ವರ ಭಟ್ ಕಜೆ, ಉಪಾಧ್ಯಕ್ಷ ಜಯಪ್ರಸಾದ್ ಕಡಮ್ಮಜೆ, ಕರಾಯ ವಲಯದ ಸಂಯೋಜಕರಾದ ರಾಜಶೇಖರ್ ಕರಾಯ ಮೊದಲಾದವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸುತ್ತಾರೆ.

Related posts

ಜು.2: ಪೆರಾಡಿ ಪ್ರಾ.ಕೃ.ಪ. ಸ. ಸಂಘ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ

Suddi Udaya

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಇಂದಬೆಟ್ಟು ಗ್ರಾ.ಪಂ ನಲ್ಲಿ ಕಾಮಗಾರಿಗಳಲ್ಲಿ ಅವ್ಯವಹಾರ ಪ್ರಕರಣ: ಕಾಮಗಾರಿಗಳಲ್ಲಿ ಕತ೯ವ್ಯ ಲೋಪ ನಡೆದಿರುವುದು ತನಿಖೆಯಿಂದ ಬಹಿರಂಗ

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya
error: Content is protected !!