23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು


ಬೆಳ್ತಂಗಡಿ: ಭಜನೆಗೆ ಬರುವಂತಹ ಮಾತೆಯರನ್ನು ಹಾಗೂ ಸಹೋದರಿಯರನ್ನು ಮತ್ತು ಪುಟಾಣಿಗಳನ್ನು ನಮ್ಮ ಸಮಾಜವು ಅತ್ಯಂತ ಗೌರವದಿಂದ ನೋಡಿಕೊಳ್ಳುತ್ತಿದೆ.

ಇಂತಹ ಸಂದರ್ಭದಲ್ಲಿ ಭಜನೆಗೆ ಜಾತಿಯ ಬಣ್ಣವಿಲ್ಲ ಭಜನೆಯಿಂದ ವಿಭಜನೆ ಇಲ್ಲ ಎನ್ನುವುದನ್ನು ಮರೆತು ಧಾರ್ಮಿಕ ಸಂಘಟನೆಗಳ ಬಗ್ಗೆ ಮತ್ತು ಒಂದು ಸಮುದಾಯವನ್ನು ಗುರಿಯಾಗಿರಿಸಿ ಭಜನೆಗೆ ಬರುವಂತಹ ಹೆಣ್ಣು ಮಕ್ಕಳನ್ನು ಸಮಾಜವು ಅಪಹಸ್ಯದಿಂದ ನೋಡುವಂತಹ ಮಾನಹಾನಿಕರ ಹೇಳಿಕೆ ನೀಡಿ ಮಹಿಳೆಯರಿಗೆ ಅವಮಾನ ಮಾಡಿರುವುದನ್ನು ಖಂಡಿಸುವುದು ಮಾತ್ರವಲ್ಲದೆ ಪದೇ ಪದೇ ಭಜನೆಯ ಹಾಗೂ ಮಹಿಳೆಯರ ಬಗ್ಗೆ ತಪ್ಪು ಹೇಳಿಕೆಗಳನ್ನು ನೀಡಿ ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆದು ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡಲು ಭಜಕರು ಶ್ರದ್ಧಾ ಭಕ್ತಿಯಿಂದ ಮಾಡುತ್ತಿರುವ ಭಜನೆಗೆ ಭಂಗ ತರಲು ಪ್ರಯತ್ನಿಸುತ್ತಿರುವ ಅರಣ್ಯಾಧಿಕಾರಿ ಸಂಜೀವ ಪೂಜಾರಿಯಿಂದ ಮುಚ್ಚಳಿಕೆಯನ್ನು ಬರೆಸಿಕೊಂಡು ಅವರನ್ನು ಅಮಾನತು ಮಾಡಬೇಕು.

ಇಲ್ಲದೆ ಹೋದಲ್ಲಿ ಮುಂದಕ್ಕೆಯು ಇವರು ನೀಡುವಂತ ಅನಗತ್ಯ ಆತಂಕಕಾರಿ ಹೇಳಿಕೆಯಿಂದ ಸಮಾಜದಲ್ಲಿ ಗೊಂದಲಮಯ ವಾತಾವರಣ ನಿರ್ಮಾಣವಾಗಬಹುದು ಎಂದು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ಇದರ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ , ಉಪಾಧ್ಯಕ್ಷ ರಾಜೇಂದ್ರ ಬಸ್ರೂರು ಕುಂದಾಪುರ, ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ವೆಂಕಟೇಶ್ವರ ಭಟ್ ಕಜೆ, ಉಪಾಧ್ಯಕ್ಷ ಜಯಪ್ರಸಾದ್ ಕಡಮ್ಮಜೆ, ಕರಾಯ ವಲಯದ ಸಂಯೋಜಕರಾದ ರಾಜಶೇಖರ್ ಕರಾಯ ಮೊದಲಾದವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸುತ್ತಾರೆ.

Related posts

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ-ಸ್ನೇಹಕಿರಣ ಮಹಿಳಾ ಜಿಲ್ಲಾ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya
error: Content is protected !!