ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು


ಬೆಳ್ತಂಗಡಿ: ಭಜನೆಗೆ ಬರುವಂತಹ ಮಾತೆಯರನ್ನು ಹಾಗೂ ಸಹೋದರಿಯರನ್ನು ಮತ್ತು ಪುಟಾಣಿಗಳನ್ನು ನಮ್ಮ ಸಮಾಜವು ಅತ್ಯಂತ ಗೌರವದಿಂದ ನೋಡಿಕೊಳ್ಳುತ್ತಿದೆ.

ಇಂತಹ ಸಂದರ್ಭದಲ್ಲಿ ಭಜನೆಗೆ ಜಾತಿಯ ಬಣ್ಣವಿಲ್ಲ ಭಜನೆಯಿಂದ ವಿಭಜನೆ ಇಲ್ಲ ಎನ್ನುವುದನ್ನು ಮರೆತು ಧಾರ್ಮಿಕ ಸಂಘಟನೆಗಳ ಬಗ್ಗೆ ಮತ್ತು ಒಂದು ಸಮುದಾಯವನ್ನು ಗುರಿಯಾಗಿರಿಸಿ ಭಜನೆಗೆ ಬರುವಂತಹ ಹೆಣ್ಣು ಮಕ್ಕಳನ್ನು ಸಮಾಜವು ಅಪಹಸ್ಯದಿಂದ ನೋಡುವಂತಹ ಮಾನಹಾನಿಕರ ಹೇಳಿಕೆ ನೀಡಿ ಮಹಿಳೆಯರಿಗೆ ಅವಮಾನ ಮಾಡಿರುವುದನ್ನು ಖಂಡಿಸುವುದು ಮಾತ್ರವಲ್ಲದೆ ಪದೇ ಪದೇ ಭಜನೆಯ ಹಾಗೂ ಮಹಿಳೆಯರ ಬಗ್ಗೆ ತಪ್ಪು ಹೇಳಿಕೆಗಳನ್ನು ನೀಡಿ ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆದು ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡಲು ಭಜಕರು ಶ್ರದ್ಧಾ ಭಕ್ತಿಯಿಂದ ಮಾಡುತ್ತಿರುವ ಭಜನೆಗೆ ಭಂಗ ತರಲು ಪ್ರಯತ್ನಿಸುತ್ತಿರುವ ಅರಣ್ಯಾಧಿಕಾರಿ ಸಂಜೀವ ಪೂಜಾರಿಯಿಂದ ಮುಚ್ಚಳಿಕೆಯನ್ನು ಬರೆಸಿಕೊಂಡು ಅವರನ್ನು ಅಮಾನತು ಮಾಡಬೇಕು.

ಇಲ್ಲದೆ ಹೋದಲ್ಲಿ ಮುಂದಕ್ಕೆಯು ಇವರು ನೀಡುವಂತ ಅನಗತ್ಯ ಆತಂಕಕಾರಿ ಹೇಳಿಕೆಯಿಂದ ಸಮಾಜದಲ್ಲಿ ಗೊಂದಲಮಯ ವಾತಾವರಣ ನಿರ್ಮಾಣವಾಗಬಹುದು ಎಂದು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ಇದರ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ , ಉಪಾಧ್ಯಕ್ಷ ರಾಜೇಂದ್ರ ಬಸ್ರೂರು ಕುಂದಾಪುರ, ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ವೆಂಕಟೇಶ್ವರ ಭಟ್ ಕಜೆ, ಉಪಾಧ್ಯಕ್ಷ ಜಯಪ್ರಸಾದ್ ಕಡಮ್ಮಜೆ, ಕರಾಯ ವಲಯದ ಸಂಯೋಜಕರಾದ ರಾಜಶೇಖರ್ ಕರಾಯ ಮೊದಲಾದವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸುತ್ತಾರೆ.

Related posts

ಎಸ್‌ಎಮ್‌ಎ: ಉತ್ತಮ ಸಮುದಾಯ ಅಭಿಯಾನ ಪ್ರಯುಕ್ತ ಬೆಳ್ತಂಗಡಿಯಲ್ಲಿ ಕಮ್ಯೂನಿಟಿ ಡಿಬೇಟ್ ಕಾರ್ಯಕ್ರಮ

Suddi Udaya

ವೇಣೂರು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

“ಲೋಕಾಯುಕ್ತ ಜನ ಸಂಪರ್ಕ ಸಭೆ: ಗ್ರಾಮ ಮಟ್ಟದಲ್ಲಿ ಭ್ರಷ್ಟಚಾರದ ಕುರಿತು ಜಾಗೃತಿ-ಲೋಕಾಯುಕ್ತ ಅಧೀಕ್ಷಕ ಕುಮಾರಚಂದ್ರ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

Suddi Udaya

ಕಡಿರುದ್ಯಾವರ: ಎರ್ಮಾಲ್ ಪಲ್ಕೆಯಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಜನಸಾಮಾನ್ಯರು

Suddi Udaya
error: Content is protected !!