September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

ಗುರುವಾಯನಕೆರೆ: ಅತ್ಯುತ್ತಮ ಫಲಿತಾಂಶ, ಶಿಸ್ತು ಬದ್ಧ ಕಲಿಕೆ, ಆಹ್ಲಾದಕರ ವಾತಾವರಣ ಎಕ್ಸೆಲ್ ಪದವಿ ಪೂರ್ವ ಕಾಲೇಜನ್ನು ಒಂದು ಆದರ್ಶ ವಿದ್ಯಾಲಯವನ್ನಾಗಿ ರೂಪಿಸಿದೆ ಎಂದು ಮಣಿಪಾಲ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಹೇಳಿದರು.

ಸ್ನಾತಕೋತ್ತರ ಅಧ್ಯಯನ ಸಂದರ್ಭದಲ್ಲಿ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ತನ್ನ ವಿದ್ಯಾರ್ಥಿಯಾಗಿದ್ದುದನ್ನು ಸ್ಮರಿಸಿದ ಅವರು, ಈ ಬೃಹತ್ ವಿದ್ಯಾಲಯದ ಬಗೆಗೆ ತನಗೆ ವಿಶೇಷ ಅಭಿಮಾನವಿದೆ ಎಂದರು.

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಇತ್ತೀಚಿಗೆ ಭೇಟಿ ನೀಡಿದ ಅವರು, ಕಾಲೇಜು ವತಿಯಿಂದ ಮಾಡಲಾದ ಗೌರವಾರ್ಪಣೆಯನ್ನು ಸ್ವೀಕರಿಸಿ, ಮಾತನಾಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಆಡಳಿತ ಮಂಡಳಿಯ ಸಹನಾ ಜೈನ್, ಶೈಕ್ಷಣಿಕ ಸಂಯೋಜಕರಾದ ನಿಶಾ ಪೂಜಾರಿ ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಮಕ ಕಾರ್ಯಕ್ರಮ

Suddi Udaya

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ರವರಿಂದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯಹಸ್ತ

Suddi Udaya
error: Content is protected !!