April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

ಗುರುವಾಯನಕೆರೆ: ಅತ್ಯುತ್ತಮ ಫಲಿತಾಂಶ, ಶಿಸ್ತು ಬದ್ಧ ಕಲಿಕೆ, ಆಹ್ಲಾದಕರ ವಾತಾವರಣ ಎಕ್ಸೆಲ್ ಪದವಿ ಪೂರ್ವ ಕಾಲೇಜನ್ನು ಒಂದು ಆದರ್ಶ ವಿದ್ಯಾಲಯವನ್ನಾಗಿ ರೂಪಿಸಿದೆ ಎಂದು ಮಣಿಪಾಲ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಹೇಳಿದರು.

ಸ್ನಾತಕೋತ್ತರ ಅಧ್ಯಯನ ಸಂದರ್ಭದಲ್ಲಿ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ತನ್ನ ವಿದ್ಯಾರ್ಥಿಯಾಗಿದ್ದುದನ್ನು ಸ್ಮರಿಸಿದ ಅವರು, ಈ ಬೃಹತ್ ವಿದ್ಯಾಲಯದ ಬಗೆಗೆ ತನಗೆ ವಿಶೇಷ ಅಭಿಮಾನವಿದೆ ಎಂದರು.

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಇತ್ತೀಚಿಗೆ ಭೇಟಿ ನೀಡಿದ ಅವರು, ಕಾಲೇಜು ವತಿಯಿಂದ ಮಾಡಲಾದ ಗೌರವಾರ್ಪಣೆಯನ್ನು ಸ್ವೀಕರಿಸಿ, ಮಾತನಾಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಆಡಳಿತ ಮಂಡಳಿಯ ಸಹನಾ ಜೈನ್, ಶೈಕ್ಷಣಿಕ ಸಂಯೋಜಕರಾದ ನಿಶಾ ಪೂಜಾರಿ ಉಪಸ್ಥಿತರಿದ್ದರು.

Related posts

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

Suddi Udaya

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ : ಹೊರ ಕಾಣಿಕೆಯ ಆಕಷ೯ಕ ಹಾಗೂ ಭವ್ಯ ವಾದ ಶೋಭಾಯಾತ್ರೆ – ಯಕ್ಷಗಾನ ವೇಷ, ಹತ್ತು ಭಜನಾ ತಂಡಗಳಿಂದ ಕುಣಿತ ಭಜನೆ, ಕೊಂಬು,ಚೆಂಡೆ, ವಾದ್ಯ ವಿಶೇಷ ಆಕಷ೯ಣೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya
error: Content is protected !!