22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿರಾಜಕೀಯ

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

ಬೆಳ್ತಂಗಡಿ: ವಿಧಾನ ಪರಿಷತ್‌ಗೆ ನಡೆಯುವ ಉಪಚುನಾವಣೆಯ ಮತದಾನ ಅ.21ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಅ.21 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ತಾಲೂಕಿನ ಒಟ್ಟು 49 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ತಹಿಶೀಲ್ದಾರ್ ಪೃಥ್ವಿ ಸಾನಿಕಮ್ ಆದೇಶಿಸಿದ್ದಾರೆ.

ಅವರು ಅ. 20ರಂದು ತಾಲೂಕು ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮತಗಟ್ಟೆ ವ್ಯಾಪ್ತಿಯಲ್ಲಿ ಜನರು ಹೆಚ್ಚು ಜನರು ಗುಂಪು ಸೇರುವುದು, ಯಾವುದೇ ರಾಜಕೀಯ ಚಟುವಟಿಕೆ ಮಾಡುವುದು.ಮತ ಕಟ್ಟೆ ಪ್ರದೇಶದಲ್ಲಿ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸುವಂತಿಲ್ಲ ಎಂದರು.

48 ಗ್ರಾಮ ಪಂಚಾಯತ್ ಮತ್ತು ಒಂದು ಪಟ್ಟಣ ಪಂಚಾಯತ್ ಸೇರಿದಂತೆ ಒಟ್ಟು 49 ಮತಗಟ್ಟೆಗಳಿವೆ.ಒಂದು ಮತಗಟ್ಟೆಯಲ್ಲಿ ಮೂವರು ಸಿಬ್ಬಂದಿಗಳು ಹಾಗೂ ಒಂದು ಪಿಸಿಯವರನ್ನು ನಿಯೋಜನೆ ಮಾಡಲಾಗುತ್ತದೆ.‌ಸೂಕ್ಷ್ಮ ಪ್ರದೇಶಕ್ಕೆ ಹೆಚ್ಚುವರಿ ಪೋಲೀಸರನ್ನು ನೇಮಿಸಲಾಗುತ್ತದೆ.ತಾಲೂಕಿನಲ್ಲಿ 325 ಪುರುಷ,351 ಮಹಿಳಾ, ಒಟ್ಟು 676 ಮತದಾರರಿದ್ದಾರೆ.ಮತದಾನ ಬೆಳಿಗ್ಗೆ 8 ರಿಂದ ಸಂಜೆ 4 ರವರೆಗೆ ನಡೆಯಲಿದೆ. ಚುನಾವಣಾ ಸಂದರ್ಭದಲ್ಲಿ ಪೋಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕರ್ತವ್ಯದಲ್ಲಿರುತ್ತಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಸಾಂಪ್ರದಾಯಿಕ ದಿನಾಚರಣೆ

Suddi Udaya

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಬೀಜ ಉಂಡೆಗಳ ಮೂಲಕ ಪ್ರಕೃತಿ ಸಂರಕ್ಷಣೆಯ ಅರಿವು

Suddi Udaya

ಮಡಂತ್ಯಾರಿನಲ್ಲಿ ಕ್ಲಾಸಿಕ್ ಮೆನ್ಸ್ ವೇರ್ ಶುಭಾರಂಭ

Suddi Udaya

ಧರ್ಮಸ್ಥಳ: ಡಿ ಹರ್ಷೇಂದ್ರ ಕುಮಾರ್ ರವರಿಗೆ ಹುಟ್ಟುಹಬ್ಬದ ಸಂಭ್ರಮ,ಶಾಂತಿವನ ಟ್ರಸ್ಟ್ ನಿಂದ ಗೌರವ

Suddi Udaya

ಸೆ.6: ರೆಖ್ಯದಲ್ಲಿ 24ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!