25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

ಬೆಳ್ತಂಗಡಿ: ಆಂಧ್ರಪ್ರದೇಶದ ಗುಂಟೂರಿನಲ್ಲಿ ಇತ್ತೀಚೆಗೆ ನಡೆದ 35ನೇ ದಕ್ಷಿಣ ವಲಯದ ಜೂನಿಯರ್ ಅಥ್ಲೆಟಿಕ್ಸ್ ನ 4×100 ಮೀಟರ್ ರಿಲೇ ರೇಸ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಉಡುಪಿ ಕ್ರೀಡಾ ಹಾಸ್ಟೆಲ್ ನ ಅಥ್ಲೀಟ್ಗಳಾದ. ಯತಿನ್ ನಾಯ್ಕ್, ಸನತ್ ಆಚಾರ್ಯ, ಪ್ರಜ್ವಲ್, ಎಮ್.ಡಿ ಕೋಸ್ಟ ಇವರ ರಿಲೇ ತಂಡ ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕವನ್ನು ಪಡೆಯುವುದರ ಜೊತೆಗೆ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಸ್ಪರ್ಧೆಗೆ ಆಯ್ಕೆಯಾಗಿರುವ ರಿಲೇ ತಂಡದ ಸದಸ್ಯನಾದ ಯತಿನ್ ನಾಯ್ಕ್ ಇವರು ಬೆಳ್ತಂಗಡಿ ತಾಲೂಕು ಕಲ್ಲೇರಿ ಗ್ರಾಮದ ಶ್ರೀಮತಿ ರೇವತಿ ಮತ್ತು ಧರ್ಮಣ್ಣ ನಾಯ್ಕ್ ದಂಪತಿಯ ಪುತ್ರನಾಗಿದ್ದು ಪ್ರಸ್ತುತ ಉಡುಪಿಯಲ್ಲಿ ಪದವಿ ವ್ಯಾಸಂಗ ನಿರತನಾಗಿದ್ದು ಈ ಹಿಂದೆಯೂ ಪ್ರಾಥಮಿಕ, ಹಾಗೂ ಪ್ರೌಢಶಾಲಾ ಹಂತದಲ್ಲಿ ಒಟ್ಟು ಮೂರು ಬಾರಿ 100 ಮೀಟರ್ ಓಟ ಹಾಗೂ 4*100 ಮೀಟರ್ ರಿಲೇಯಲ್ಲಿ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದರು.

Related posts

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯ ಗಣಿತ ಶಿಕ್ಷಕಿ ಪುಷ್ಪರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Suddi Udaya

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಗುರುವಾಯನಕೆರೆಯಲ್ಲಿ ವಾಹದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ :ಜನರಲ್ಲಿ ಆತಂಕ ಸೃಷ್ಟಿ.

Suddi Udaya
error: Content is protected !!