25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

ಬೆಳ್ತಂಗಡಿ: ಆಂಧ್ರಪ್ರದೇಶದ ಗುಂಟೂರಿನಲ್ಲಿ ಇತ್ತೀಚೆಗೆ ನಡೆದ 35ನೇ ದಕ್ಷಿಣ ವಲಯದ ಜೂನಿಯರ್ ಅಥ್ಲೆಟಿಕ್ಸ್ ನ 4×100 ಮೀಟರ್ ರಿಲೇ ರೇಸ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಉಡುಪಿ ಕ್ರೀಡಾ ಹಾಸ್ಟೆಲ್ ನ ಅಥ್ಲೀಟ್ಗಳಾದ. ಯತಿನ್ ನಾಯ್ಕ್, ಸನತ್ ಆಚಾರ್ಯ, ಪ್ರಜ್ವಲ್, ಎಮ್.ಡಿ ಕೋಸ್ಟ ಇವರ ರಿಲೇ ತಂಡ ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕವನ್ನು ಪಡೆಯುವುದರ ಜೊತೆಗೆ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಸ್ಪರ್ಧೆಗೆ ಆಯ್ಕೆಯಾಗಿರುವ ರಿಲೇ ತಂಡದ ಸದಸ್ಯನಾದ ಯತಿನ್ ನಾಯ್ಕ್ ಇವರು ಬೆಳ್ತಂಗಡಿ ತಾಲೂಕು ಕಲ್ಲೇರಿ ಗ್ರಾಮದ ಶ್ರೀಮತಿ ರೇವತಿ ಮತ್ತು ಧರ್ಮಣ್ಣ ನಾಯ್ಕ್ ದಂಪತಿಯ ಪುತ್ರನಾಗಿದ್ದು ಪ್ರಸ್ತುತ ಉಡುಪಿಯಲ್ಲಿ ಪದವಿ ವ್ಯಾಸಂಗ ನಿರತನಾಗಿದ್ದು ಈ ಹಿಂದೆಯೂ ಪ್ರಾಥಮಿಕ, ಹಾಗೂ ಪ್ರೌಢಶಾಲಾ ಹಂತದಲ್ಲಿ ಒಟ್ಟು ಮೂರು ಬಾರಿ 100 ಮೀಟರ್ ಓಟ ಹಾಗೂ 4*100 ಮೀಟರ್ ರಿಲೇಯಲ್ಲಿ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದರು.

Related posts

ಚೆಕ್ ಬೌನ್ಸ್ ಪ್ರಕರಣ: ನ್ಯಾಯಾಲಯಕ್ಕೆ ಐದು ವರ್ಷ ಹಾಜರಾಗದ ಆರೋಪಿಯ ಬಂಧನ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ಧರ್ಮಸ್ಥಳ: ಮುಳಿಕ್ಕರ್ ನಲ್ಲಿ ತೋಟ ಹಾಗೂ ಗದ್ದೆಗಳಿಗೆ ಲಗ್ಗೆ ಇಟ್ಟ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಅಭಿನಂದನಾ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ: ಬಿಜೆಪಿ ಗೆಲುವಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

Suddi Udaya
error: Content is protected !!