September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಜ್ಯಮಟ್ಟದ ಭಾಷಣ ಸ್ಪರ್ಧೆ : ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಬಿ.ಇಡಿ. ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಪ್ರಥಮ ಸ್ಥಾನ

ಉಜಿರೆ : ರಾಷ್ಟ್ರೋತ್ಥಾನ ಪರಿಷತ್ 60 ವರ್ಷ ಪೂರೈಸುತ್ತಿರುವ ಶುಭ ಸಂದರ್ಭದಲ್ಲಿ ಪ್ರಶಿಕ್ಷಣಭಾರತಿ ವತಿಯಿಂದ ಅ. 19 ರಂದು ರಾಷ್ಟ್ರೋತ್ಥಾನ ವಿದ್ಯಾಕೇಂದ್ರ, ಥಣಿಸಂದ್ರ, ಬೆಂಗಳೂರಿನಲ್ಲಿ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಿಗೆ ಕನ್ನಡ ಹಾಗೂ ಇಂಗ್ಲೀಷ್ ವಿಭಾಗದಲ್ಲಿ ಭಾಷಣ ಸ್ಪರ್ಧೆಯನ್ನು ಆಯೋಜಿಸಿದ್ದು ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಇವರು ಇಂಗ್ಲೀಷ್ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರೂ.15000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಪಡೆದುಕೊಂಡಿರುತ್ತಾರೆ.


ಇವರು ಸೆ.23ರಂದು ರಾಷ್ಟ್ರೋತ್ಥಾನ ವಿದ್ಯಾಕೇಂದ್ರ, ತೊಕ್ಕೊಟ್ಟು, ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರೂಪಾಯಿ2000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಪಡೆದುಕೊಂಡು ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆಯಾಗಿದ್ದರು.

ಇವರು ಹೈಸ್ಕೂಲ್ ಶಿಕ್ಷಣವನ್ನು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಿಯುಸಿ ಶಿಕ್ಷಣವನ್ನು ಎಸ್.ಡಿ.ಎಮ್. ಕಾಲೇಜು ಉಜಿರೆಯಲ್ಲಿ ಪದವಿ ಶಿಕ್ಷಣವನ್ನು ಸಂತ ಅಲೋಷಿಯಸ್ ಕಾಲೇಜು ಮಂಗಳೂರಿನಲ್ಲಿ ಮುಗಿಸಿರುತ್ತಾರೆ.

ಹಲಕೆ ನಿವಾಸಿ ಮಾಜಿ ಸೈನಿಕ ವಾಲ್ಟರ್ ಸಿಕ್ವೇರಾ ಮತ್ತು ಶಿಕ್ಷಕಿ ಶ್ರೀಮತಿ ಲೀನಾ ಡಿಸೋಜಾ ರವರ ಪುತ್ರ.


ಕಾಲೇಜಿನ ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅಭಿನಂದನೆಯೊಂದಿಗೆ ಶುಭಹಾರೈಸಿರುತ್ತಾರೆ.

Related posts

ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಭೇಟಿ

Suddi Udaya

ಬೆಳಾಲು ಯುವತಿ ಅನುಮಾನಸ್ಪದ ಸಾವು ಪೊಲೀಸರಿಂದ ತನಿಖೆ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

Suddi Udaya

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್.ಜನಾರ್ಧನರವರ ನೇಮಕ: ಸಿರಿ ಸಂಸ್ಥೆಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ

Suddi Udaya

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya
error: Content is protected !!