30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

ಬೆಳ್ತಂಗಡಿ: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಮಧ್ಯಪ್ರದೇಶದ ಹಾರ್ದ ಎಂಬಲ್ಲಿ ನಡೆದ ಹತ್ತೊಂಬತ್ತು ವರ್ಷದೊಳಗಿನ ವಯೋಮಾನದ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ನವನೀತ್ ಕೊಯ್ಯೂರು ಹಾಗೂ ಅವರ ತಂಡ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕವನ್ನು ಗಳಿಸಿದ್ದಾರೆ.

ನವನೀತ್ ಇವರು ಶಾರದಾಗಣಪತಿ ವಿದ್ಯಾಕೇಂದ್ರ, ಪುಣ್ಯಕೋಟಿನಗರ ಕೈರಂಗಳ, ಮುಡಿಪು ಇಲ್ಲಿ ದ್ವಿತೀಯ ಪಿ.ಯು.ಸಿ ವ್ಯಾಸಂಗ ಮಾಡುತ್ತಿದ್ದಾರೆ.


ಇವರು ಕೊಯ್ಯೂರು ಗ್ರಾಮದ ನೀರಾರಿ ನಿವಾಸಿಗಳಾದ ದುಗ್ಗಪ್ಪ ಹಾಗೂ ಶ್ರೀಮತಿ ಕಮಲ ದಂಪತಿಯ ಪುತ್ರರಾಗಿದ್ದಾರೆ. ನವನೀತ್ ಅವರು ಆಸೀದ್ ಪಡಂಗಡಿ, ಪ್ರೀತಂ ಬಂಗೇರ, ಹಾಗೂ ಲಿಖಿತ್‌ರವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದಾರೆ.

Related posts

ನಾರಾವಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ನಿಧಿ ವಿತರಣೆ

Suddi Udaya

ಶಿಬಾಜೆ: ತುಂಬತ್ತಾಜೆ ನಿವಾಸಿ ಲೀಲಮ್ಮ ನಿಧನ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

Suddi Udaya

ಆಮಂತ್ರಣ ಸೇವಾ ಪ್ರತಿಷ್ಠಾನ ಗೌರವ ಸಲಹೆಗಾರರಾಗಿ ಕಿರಣ್‌ಚಂದ್ರ ಡಿ.ಪುಷ್ಪಗಿರಿ

Suddi Udaya
error: Content is protected !!