July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಅ.19 ರಂದು ಸುದರ್ಶನ ಚಕ್ರಗ್ರಹಣ ಎಂಬ ಯಕ್ಷಗಾನ ತಾಳಮದ್ದಳೆಯನ್ನು ವೇಣೂರಿನ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಸಂಘದ ಸದಸ್ಯರು ನಡೆಸಿಕೊಟ್ಟರು.

ಹಿಮ್ಮೇಳದಲ್ಲಿ ಭಾಗವತರಾಗಿ ಬಲಿಪ ಶಿವಶಂಕರ ಭಟ್, ಚೆಂಡೆ ಮದ್ದಳೆಗಳಲ್ಲಿ ಕೊಂಕಣಾಜೆ ಚಂದ್ರಶೇಖರ ಭಟ್ ಹಾಗೂ ಬೆಳಾಲು ಗಣೇಶ ಭಟ್, ಚಕ್ರತಾಳದಲ್ಲಿ ಇದೇ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿ ಸುಷೇಣರವರು ಸಹಕರಿಸಿದರು. ಶಾಲಾ ವಿದ್ಯಾರ್ಥಿಗಳಾದ ಒಂಬತ್ತನೆಯ ತರಗತಿಯ ರಂಜನಿ ಹಾಗೂ ನಾಲ್ಕನೇ ತರಗತಿಯ ಸುಷೇಣರು ಆಸಕ್ತಿಯಿಂದ ಭಾಗವಹಿಸಿದ್ದು ವಿಶೇಷವಾಗಿತ್ತು.


ಒಂಬತ್ತನೇ ತರಗತಿಯ ಕನ್ನಡ ಪಾಠದಲ್ಲಿ ಇರುವ ಈ ಭಾಗವನ್ನು ನಡೆಸಲು ಶಾಲಾ ಮುಖ್ಯ ಪ್ರಬಂಧಕರಾದ ಕೆ. ಶಿವರಾಮ ಹೆಗ್ಡೆಯವರು ಅವಕಾಶವನ್ನು ನೀಡಿದ್ದು, ಶಾಲಾ  ಸಂಚಾಲಕಿ ಶ್ರೀಮತಿ ಶೀಲಾ ಕೆ. ಎಸ್ ಹೆಗ್ಡೆ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುಜಾತ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಖ್ಯಾತ ಯಕ್ಷಗಾನ ಭಾಗವತರಾಗಿದ್ದ ದಿ. ಬಲಿಪ ಪ್ರಸಾದ ಭಟ್ ರವರ ಸ್ಮರಣೆಯನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರಿನ ಪ್ರಮುಖರು ನೆರೆದಿದ್ದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ತರಬೇತಿ

Suddi Udaya

ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ಮೂಲಸೌಕರ್ಯ ಒದಗಿಸಲು ಅನುದಾನ ಮಂಜೂರು ಮಾಡುವಂತೆ ಸಚಿವ ದಿನೇಶ್ ಗುಂಡೂರಾವ್ ರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಡಿ.14: ಮುಂಡೂರು ನಾಗಾಂಬಿಕಾ ಕ್ಷೇತ್ರದಲ್ಲಿ 40ಕ್ಕೂ ಮಿಕ್ಕಿ ಭಜನಾ ಮಂಡಳಿಗಳಿಂದ ಏಕಕಾಲದಲ್ಲಿ ಕಣಿತ ಭಜನೋತ್ಸವ

Suddi Udaya

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

Suddi Udaya

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು

Suddi Udaya

ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ದಿಂದ ಭಜನೆ

Suddi Udaya
error: Content is protected !!