30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ನಿರ್ಮಲ ಚಿತ್ತ ಲಹರಿ’ ಕವನ ಸಂಕಲನ ಬಿಡುಗಡೆ

ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅ.19 ರಂದು ಹತ್ತನೇ ತರಗತಿಯ ವಿದ್ಯಾರ್ಥಿ ನಿರಂಜನ ಶಿವಾನಂದ ಅಗಸಿಮನಿಯವರು ರಚಿಸಿದ ಕವನಗಳ ಕವನ ಸಂಕಲನ  ‘ನಿರ್ಮಲ ಚಿತ್ತ ಲಹರಿ’ ಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಸುಬ್ರಹ್ಮಣ್ಯ ಭಟ್ ಬಿಡುಗಡೆಗೊಳಿಸಿದರು.

ಕವನ ಸಂಕಲನದ ಪರಿಚಯವನ್ನು ಸರಕಾರಿ ಪದವಿಪೂರ್ವ ಕಾಲೇಜು, ಕೋಣಾಲಿನ ಉಪನ್ಯಾಸಕಿ ಶ್ರೀಮತಿ ಸುಪ್ರೀತಾ ಚರಣ್  ರವರು ಮಾಡಿದ್ದು, ಶಾಲಾ ಸಂಚಾಲಕಿ ಶ್ರೀಮತಿ ಶೀಲಾ ಎಸ್ ಹೆಗ್ಡೆಯವರು ಶುಭಾಂಸನೆಗೈದರು. ಸಂದರ್ಭದಲ್ಲಿ ಭಾರತೀಯ ಭೂಸೇನೆಗೆ  ಅಗ್ನಿವೀರ್ ಯೋಜನೆಯಲ್ಲಿ ಸೇರ್ಪಡೆಯಾದ ಶಾಲೆಯ ಹಳೆ ವಿದ್ಯಾರ್ಥಿ ಯಂ.ಜಿ. ಮಣಿಕಂಠರವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಪ್ರಬಂಧಕರಾದ ಕೆ. ಶಿವರಾಮ ಹೆಗ್ಡೆಯವರು ವಹಿಸಿದ್ದು,
ಶಾಲಾ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಪ್ರಶಾಂತ್, ಉಪಾಧ್ಯಕ್ಷ ರಾಜೇಶ್ ಮೂಡುಕೋಡಿ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುಜಾತರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರಿನ ಪ್ರಮುಖರು ಭಾಗವಹಿಸಿದ್ದರು.

Related posts

ತೆಕ್ಕಾರು : ಇಸ್ಮಾಯಿಲ್ ಮೇಲವ ನಿಧನ

Suddi Udaya

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಜೇಸಿಂತಾ ಮೋನಿಸ್ ನಿಧನ

Suddi Udaya

ಶಿಶಿಲ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪದ್ಮಪ್ಪ ಆಯ್ಕೆ

Suddi Udaya

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya
error: Content is protected !!