25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಕುಂಜರ್ಪದಲ್ಲಿ ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು ಸೌಜನ್ಯ ಟ್ರೋಫಿ -2024

ಉಜಿರೆ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪ ಇದರ ಆಶ್ರಯದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ರವರ ನೇತೃತ್ವದಲ್ಲಿ ಅ.20ರಂದು ಕುಂಜರ್ಪದ ಕ್ರೀಡಾ ಗದ್ದೆಯಲ್ಲಿ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 , ವಿವಿಧ ಆಟೋಟ ಸ್ಪರ್ಧೆಗಳು ಹಾಗೂ ಮುಕ್ತ ಹಗ್ಗ ಜಗ್ಗಾಟ ಕಾರ್ಯಕ್ರಮ ನಡೆಯಿತು.

ಡಾ। ಎಂ. ಗುರುಪ್ರಸಾದ್ ರಾವ್ ಮತ್ತು ಶ್ರೀಮತಿ ಡಾ| ವಿದ್ಯಾವತಿ ಜಿ. ರಾವ್ ಕುಂಜರ್ಪ ಇವರು ದೀಪ ಪ್ರಜ್ವಲನೆ ಗೊಳಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಬೆಳ್ತಂಗಡಿ ತಾಲೂಕು ರಾ.ಹಿಂ.ಜಾ.ವೇ. ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು ಅಧ್ಯಕ್ಷತೆಯನ್ನು ವಹಿಸಿದರು.

ವೇದಿಕೆಯಲ್ಲಿ ಸೋಮಪ್ಪ ಪೂಜಾರಿ ಬಾರೆದಡಿ, ಶ್ರೀಮತಿ ರತ್ನ ಅಣ್ಣಿ ಪೂಜಾರಿ, ಶ್ರೀಮತಿ ಚೇತನಾ ರಮಾನಂದ ಕಲ್ಲೆ, ಶ್ರೀ ಸಾಯಿ ಮೆಡಿಕಲ್ ಉಜಿರೆ, ಕೃಷ್ಣಪ್ಪ ಅಂಚನ್ ಕುಂಜರ್ಪ, ಸಂಜೀವ ಶೆಟ್ಟಿ ಕುಂಜರ್ಪ, ಶ್ರೀಮತಿ ಗಿರಿಜಾ ಆಚಾರ್ಯ ಕುಂಜರ್ಪ, ಶ್ರೀಮತಿ ಲಕ್ಷ್ಮೀ ಮಹಾಬಲ ಪೂಜಾರಿ ಬಾರೆದಡಿ, ಲಕ್ಷ್ಮಣ್ ಸುವರ್ಣ ಕುಂಜರ್ಪ, ಅಣ್ಣು ನಾಯ್ಕ ಕಲ್ಲೆ, ಬಾಬು ಪೆರ್ಲ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿಶೇಷವಾಗಿ ಕೋಣ ಓಡಿಸುವ ಮೂಲಕ ಕ್ರೀಡಾ ಸ್ಪರ್ಧೆಗಳನ್ನು ಉದ್ಘಾಟನೆಗೊಳಿಸಲಾಯಿತು. ಬೆಳಗ್ಗೆ ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳು ನಡೆಯಿತು. ರಾತ್ರಿ ಪುರುಷರ ವಿಭಾಗದ ಮುಕ್ತ ಹಗ್ಗ ಜಗ್ಗಾಟ ಪಂದ್ಯಾಟ ನಡೆದಿದ್ದು, ಸುಮಾರು 40 ತಂಡಗಳು ಭಾಗವಹಿಸಿದ್ದವು.

Related posts

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಜೈನ್ ಮೊಬೈಲ್‌ನಲ್ಲಿ ದಸರಾ ಹಾಗೂ 20ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಎಸ್.ಡಿ.ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಡಿ.27: ಗುರುವಾಯನಕೆರೆ 37 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!