38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

ಬೆಳ್ತಂಗಡಿ: ಆಂಧ್ರಪ್ರದೇಶದ ಗುಂಟೂರಿನಲ್ಲಿ ಇತ್ತೀಚೆಗೆ ನಡೆದ 35ನೇ ದಕ್ಷಿಣ ವಲಯದ ಜೂನಿಯರ್ ಅಥ್ಲೆಟಿಕ್ಸ್ ನ 4×100 ಮೀಟರ್ ರಿಲೇ ರೇಸ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಉಡುಪಿ ಕ್ರೀಡಾ ಹಾಸ್ಟೆಲ್ ನ ಅಥ್ಲೀಟ್ಗಳಾದ. ಯತಿನ್ ನಾಯ್ಕ್, ಸನತ್ ಆಚಾರ್ಯ, ಪ್ರಜ್ವಲ್, ಎಮ್.ಡಿ ಕೋಸ್ಟ ಇವರ ರಿಲೇ ತಂಡ ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕವನ್ನು ಪಡೆಯುವುದರ ಜೊತೆಗೆ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಸ್ಪರ್ಧೆಗೆ ಆಯ್ಕೆಯಾಗಿರುವ ರಿಲೇ ತಂಡದ ಸದಸ್ಯನಾದ ಯತಿನ್ ನಾಯ್ಕ್ ಇವರು ಬೆಳ್ತಂಗಡಿ ತಾಲೂಕು ಕಲ್ಲೇರಿ ಗ್ರಾಮದ ಶ್ರೀಮತಿ ರೇವತಿ ಮತ್ತು ಧರ್ಮಣ್ಣ ನಾಯ್ಕ್ ದಂಪತಿಯ ಪುತ್ರನಾಗಿದ್ದು ಪ್ರಸ್ತುತ ಉಡುಪಿಯಲ್ಲಿ ಪದವಿ ವ್ಯಾಸಂಗ ನಿರತನಾಗಿದ್ದು ಈ ಹಿಂದೆಯೂ ಪ್ರಾಥಮಿಕ, ಹಾಗೂ ಪ್ರೌಢಶಾಲಾ ಹಂತದಲ್ಲಿ ಒಟ್ಟು ಮೂರು ಬಾರಿ 100 ಮೀಟರ್ ಓಟ ಹಾಗೂ 4*100 ಮೀಟರ್ ರಿಲೇಯಲ್ಲಿ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದರು.

Related posts

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

Suddi Udaya

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

Suddi Udaya

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya

ತಾಲೂಕಿನಲ್ಲಿ ಮುಂದುವರಿದ ಬೆಟ್ಟಿಂಗ್ ಭರಾಟೆ

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya
error: Content is protected !!