33.4 C
ಪುತ್ತೂರು, ಬೆಳ್ತಂಗಡಿ
March 31, 2025
ಆಯ್ಕೆತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: “ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ರಾಜ್ಯದ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿಗೆ ಬಜಿರೆ ಶಾಲೆಯ ಇಬ್ಬರು ಶಿಕ್ಷಕಿಯರು ಆಯ್ಕೆಯಾಗಿದ್ದು ಬೆಂಗಳೂರು ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕಿನ ಪಿ. ಎಮ್. ಶ್ರೀ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಜಿರೆಯಲ್ಲಿ ಕಳೆದ 4 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಮಾಲತಿ ದಿನೇಶ್ ಕುಮಾರ್ ಮತ್ತು ಜೆನಿಫರ್ ಮಸ್ಕರೇನ್ಹಸ್ ಸರಕಾರಿ ಪ್ರಾಥಮಿಕ ಅತಿಥಿ ಶಿಕ್ಷಕರಾಗಿ ನೇಮಕಗೊಂಡು, ಶಾಲೆಯಲ್ಲಿ ಉತ್ತಮ ಶಿಕ್ಷಕರಾಗಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿ, ಪ್ರಾಥಮಿಕ ಅತಿಥಿ ಶಿಕ್ಷಕರ ರಾಜ್ಯ ಸಮಿತಿಯ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಉತ್ತಮ ರೀತಿಯಲ್ಲಿ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇವರ ಈ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ರಾಜ್ಯದ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Related posts

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

Suddi Udaya

ಶ್ರೀ ದುರ್ಗಾ ಫರ್ನಿಚರ್ ಮತ್ತು ಇಲೆಕ್ಟ್ರಾನಿಕ್ಸ್‌ನಲ್ಲಿ ಖರೀದಿಗೆ ವಿಶೇಷ ಡಿಸ್ಕೌಂಟ್

Suddi Udaya

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ