25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: “ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ರಾಜ್ಯದ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿಗೆ ಬಜಿರೆ ಶಾಲೆಯ ಇಬ್ಬರು ಶಿಕ್ಷಕಿಯರು ಆಯ್ಕೆಯಾಗಿದ್ದು ಬೆಂಗಳೂರು ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕಿನ ಪಿ. ಎಮ್. ಶ್ರೀ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಜಿರೆಯಲ್ಲಿ ಕಳೆದ 4 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಮಾಲತಿ ದಿನೇಶ್ ಕುಮಾರ್ ಮತ್ತು ಜೆನಿಫರ್ ಮಸ್ಕರೇನ್ಹಸ್ ಸರಕಾರಿ ಪ್ರಾಥಮಿಕ ಅತಿಥಿ ಶಿಕ್ಷಕರಾಗಿ ನೇಮಕಗೊಂಡು, ಶಾಲೆಯಲ್ಲಿ ಉತ್ತಮ ಶಿಕ್ಷಕರಾಗಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿ, ಪ್ರಾಥಮಿಕ ಅತಿಥಿ ಶಿಕ್ಷಕರ ರಾಜ್ಯ ಸಮಿತಿಯ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಉತ್ತಮ ರೀತಿಯಲ್ಲಿ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇವರ ಈ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ರಾಜ್ಯದ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Related posts

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya

ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಮಂಡಳಿಗೆ ಆಯ್ಕೆ

Suddi Udaya
error: Content is protected !!