25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

ಉಜಿರೆ : ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಕರ್ಣಾಟಕ ಸರಕಾರ ಹಾಗೂ ಶ್ರೀ ರಾಮ ಕೃಷ್ಣ ವಿಧ್ಯಾಶಾಲಾ ಮೈಸೂರ್ ಸಹಯೋಗದೊಂದಿಗೆ ನಡೆದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ ತಂಡ ದ್ವಿತೀಯ ಸ್ಥಾನವನ್ನು ಗಳಿಸಿ ಸುಮಿತ್ ಎಂ ಆರ್ ಇವರು ಹರಿಯಾಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದ ತಂಡವನ್ನು ಪ್ರತಿನಿಧಿಸಲಿರುತ್ತಾರೆ.

ಕ್ರಿಸ್ ಅಂಜನ್ ಬ್ಯಾಪ್ಟಿಸ್ಟ್ಪ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು ಉಜಿರೆ, ಸುಮಿತ್ ಎ ಆರ್ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು ಉಜಿರೆ, ಅನ್ಸುಲ್ ಸೈಂಟ್ ಅಲೋಶಿಯಸ್ ಪ.ಪೂ ಕಾಲೇಜು ಮಂಗಳೂರು, ಲಿಖಿತ್ ಸೈಂಟ್ ಫಿಲೋಮಿನಾ ಪ.ಪೂ ಕಾಲೇಜು ಪುತ್ತೂರು, ವಾಸುಕಿಅಭಯ ಶರ್ಮ ತುಂಬೆ ಪ.ಪೂ ಕಾಲೇಜು ಬಂಟ್ವಾಳ ತಂಡ, ವ್ಯವಸ್ಥಾಪಕರಾಗಿ ಮೋಹಿನಿ.ಎಸ್ ಡಿ ಎಂ ಉಜಿರೆ
ಹಾಗೂ ನವೀನ್ ಕುಮಾರ್ ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರು ಭಾಗವಹಿಸಿದ್ದರು.

ಇವರಿಗೆ ಕಾಲೇಜಿನ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು ಡಾ| ಸತೀಶ್ಚಂದ್ರ ಎಸ್, ಕಾಲೇಜಿನ ಪ್ರಾಂಶುಪಾಲರು ಪ್ರಮೋದ್ ಕುಮಾರ್, ಕ್ರೀಡಾ ಸಂಘದ ಕಾರ್ಯದರ್ಶಿಗಳು ರಮೇಶ್ ,ದೈಹಿಕ ಶಿಕ್ಷಣ ನಿರ್ದೇಶಕರು ಸಂದೇಶ್ ಪೂಂಜ ಹಾಗೂ ಬೋಧಕ , ಬೋಧಕೇತರ ಸಿಬ್ಬಂದಿ ವರ್ಗದವರು ಶುಭ ಹಾರೈಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ. ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.54.80 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya
error: Content is protected !!