July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಅ.19 ರಂದು ಸುದರ್ಶನ ಚಕ್ರಗ್ರಹಣ ಎಂಬ ಯಕ್ಷಗಾನ ತಾಳಮದ್ದಳೆಯನ್ನು ವೇಣೂರಿನ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಸಂಘದ ಸದಸ್ಯರು ನಡೆಸಿಕೊಟ್ಟರು.

ಹಿಮ್ಮೇಳದಲ್ಲಿ ಭಾಗವತರಾಗಿ ಬಲಿಪ ಶಿವಶಂಕರ ಭಟ್, ಚೆಂಡೆ ಮದ್ದಳೆಗಳಲ್ಲಿ ಕೊಂಕಣಾಜೆ ಚಂದ್ರಶೇಖರ ಭಟ್ ಹಾಗೂ ಬೆಳಾಲು ಗಣೇಶ ಭಟ್, ಚಕ್ರತಾಳದಲ್ಲಿ ಇದೇ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿ ಸುಷೇಣರವರು ಸಹಕರಿಸಿದರು. ಶಾಲಾ ವಿದ್ಯಾರ್ಥಿಗಳಾದ ಒಂಬತ್ತನೆಯ ತರಗತಿಯ ರಂಜನಿ ಹಾಗೂ ನಾಲ್ಕನೇ ತರಗತಿಯ ಸುಷೇಣರು ಆಸಕ್ತಿಯಿಂದ ಭಾಗವಹಿಸಿದ್ದು ವಿಶೇಷವಾಗಿತ್ತು.


ಒಂಬತ್ತನೇ ತರಗತಿಯ ಕನ್ನಡ ಪಾಠದಲ್ಲಿ ಇರುವ ಈ ಭಾಗವನ್ನು ನಡೆಸಲು ಶಾಲಾ ಮುಖ್ಯ ಪ್ರಬಂಧಕರಾದ ಕೆ. ಶಿವರಾಮ ಹೆಗ್ಡೆಯವರು ಅವಕಾಶವನ್ನು ನೀಡಿದ್ದು, ಶಾಲಾ  ಸಂಚಾಲಕಿ ಶ್ರೀಮತಿ ಶೀಲಾ ಕೆ. ಎಸ್ ಹೆಗ್ಡೆ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುಜಾತ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಖ್ಯಾತ ಯಕ್ಷಗಾನ ಭಾಗವತರಾಗಿದ್ದ ದಿ. ಬಲಿಪ ಪ್ರಸಾದ ಭಟ್ ರವರ ಸ್ಮರಣೆಯನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರಿನ ಪ್ರಮುಖರು ನೆರೆದಿದ್ದರು.

Related posts

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ಕುಚ್ಚಲು ಅಕ್ಕಿ ವಿತರಣೆಗೆ ಒತ್ತಾಯಿಸಿ ನ್ಯಾಯಬೆಲೆ ಅಂಗಡಿಗಳ ಮುಂದೆ ಎಸ್‌ಡಿಪಿಐ ಸಾಂಕೇತಿಕ ಪ್ರತಿಭಟನೆ

Suddi Udaya

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya
error: Content is protected !!