23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಅ.19 ರಂದು ಸುದರ್ಶನ ಚಕ್ರಗ್ರಹಣ ಎಂಬ ಯಕ್ಷಗಾನ ತಾಳಮದ್ದಳೆಯನ್ನು ವೇಣೂರಿನ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಸಂಘದ ಸದಸ್ಯರು ನಡೆಸಿಕೊಟ್ಟರು.

ಹಿಮ್ಮೇಳದಲ್ಲಿ ಭಾಗವತರಾಗಿ ಬಲಿಪ ಶಿವಶಂಕರ ಭಟ್, ಚೆಂಡೆ ಮದ್ದಳೆಗಳಲ್ಲಿ ಕೊಂಕಣಾಜೆ ಚಂದ್ರಶೇಖರ ಭಟ್ ಹಾಗೂ ಬೆಳಾಲು ಗಣೇಶ ಭಟ್, ಚಕ್ರತಾಳದಲ್ಲಿ ಇದೇ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿ ಸುಷೇಣರವರು ಸಹಕರಿಸಿದರು. ಶಾಲಾ ವಿದ್ಯಾರ್ಥಿಗಳಾದ ಒಂಬತ್ತನೆಯ ತರಗತಿಯ ರಂಜನಿ ಹಾಗೂ ನಾಲ್ಕನೇ ತರಗತಿಯ ಸುಷೇಣರು ಆಸಕ್ತಿಯಿಂದ ಭಾಗವಹಿಸಿದ್ದು ವಿಶೇಷವಾಗಿತ್ತು.


ಒಂಬತ್ತನೇ ತರಗತಿಯ ಕನ್ನಡ ಪಾಠದಲ್ಲಿ ಇರುವ ಈ ಭಾಗವನ್ನು ನಡೆಸಲು ಶಾಲಾ ಮುಖ್ಯ ಪ್ರಬಂಧಕರಾದ ಕೆ. ಶಿವರಾಮ ಹೆಗ್ಡೆಯವರು ಅವಕಾಶವನ್ನು ನೀಡಿದ್ದು, ಶಾಲಾ  ಸಂಚಾಲಕಿ ಶ್ರೀಮತಿ ಶೀಲಾ ಕೆ. ಎಸ್ ಹೆಗ್ಡೆ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುಜಾತ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಖ್ಯಾತ ಯಕ್ಷಗಾನ ಭಾಗವತರಾಗಿದ್ದ ದಿ. ಬಲಿಪ ಪ್ರಸಾದ ಭಟ್ ರವರ ಸ್ಮರಣೆಯನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರಿನ ಪ್ರಮುಖರು ನೆರೆದಿದ್ದರು.

Related posts

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya

ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಎಂ.ಜಿ. ಶೆಟ್ಟಿಯವರ ನಿಧನಕ್ಕೆ ಸಂತಾಪ

Suddi Udaya

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

Suddi Udaya

ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ನಾಗರ ಹಾವು ಪ್ರತ್ಯಕ್ಷ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya

ರಾಜ್ಯಮಟ್ಟದ ‘ಎಸ್.ಡಿ.ಎಂ ಉದ್ಯೋಗಂ – 2026’ ಗೆ ಚಾಲನೆ

Suddi Udaya
error: Content is protected !!