July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ನಿರ್ಮಲ ಚಿತ್ತ ಲಹರಿ’ ಕವನ ಸಂಕಲನ ಬಿಡುಗಡೆ

ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅ.19 ರಂದು ಹತ್ತನೇ ತರಗತಿಯ ವಿದ್ಯಾರ್ಥಿ ನಿರಂಜನ ಶಿವಾನಂದ ಅಗಸಿಮನಿಯವರು ರಚಿಸಿದ ಕವನಗಳ ಕವನ ಸಂಕಲನ  ‘ನಿರ್ಮಲ ಚಿತ್ತ ಲಹರಿ’ ಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಸುಬ್ರಹ್ಮಣ್ಯ ಭಟ್ ಬಿಡುಗಡೆಗೊಳಿಸಿದರು.

ಕವನ ಸಂಕಲನದ ಪರಿಚಯವನ್ನು ಸರಕಾರಿ ಪದವಿಪೂರ್ವ ಕಾಲೇಜು, ಕೋಣಾಲಿನ ಉಪನ್ಯಾಸಕಿ ಶ್ರೀಮತಿ ಸುಪ್ರೀತಾ ಚರಣ್  ರವರು ಮಾಡಿದ್ದು, ಶಾಲಾ ಸಂಚಾಲಕಿ ಶ್ರೀಮತಿ ಶೀಲಾ ಎಸ್ ಹೆಗ್ಡೆಯವರು ಶುಭಾಂಸನೆಗೈದರು. ಸಂದರ್ಭದಲ್ಲಿ ಭಾರತೀಯ ಭೂಸೇನೆಗೆ  ಅಗ್ನಿವೀರ್ ಯೋಜನೆಯಲ್ಲಿ ಸೇರ್ಪಡೆಯಾದ ಶಾಲೆಯ ಹಳೆ ವಿದ್ಯಾರ್ಥಿ ಯಂ.ಜಿ. ಮಣಿಕಂಠರವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಪ್ರಬಂಧಕರಾದ ಕೆ. ಶಿವರಾಮ ಹೆಗ್ಡೆಯವರು ವಹಿಸಿದ್ದು,
ಶಾಲಾ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಪ್ರಶಾಂತ್, ಉಪಾಧ್ಯಕ್ಷ ರಾಜೇಶ್ ಮೂಡುಕೋಡಿ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುಜಾತರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರಿನ ಪ್ರಮುಖರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ: ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯಿಂದ ಆಟಿ ಕೂಟ ಆಚರಣೆ: ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಮಹನೀಯರಿಗೆ ವಿವಿಧ ಸ್ಪರ್ಧೆಗಳು

Suddi Udaya

ನಾರಾವಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ರೂ. 3.74 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 10% ಡಿವಿಡೆಂಡ್

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ವೇಣೂರು ಪ್ರೌಢಶಾಲಾ ವಿದ್ಯಾರ್ಥಿಯ ಚಿಕಿತ್ಸೆಗೆ ರೂ 40 ಸಾವಿರ ಆರ್ಥಿಕ ನೆರವು ಹಸ್ತಾಂತರ

Suddi Udaya
error: Content is protected !!