27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

ಬೆಳ್ತಂಗಡಿ: ಆಂಧ್ರಪ್ರದೇಶದ ಗುಂಟೂರಿನಲ್ಲಿ ಇತ್ತೀಚೆಗೆ ನಡೆದ 35ನೇ ದಕ್ಷಿಣ ವಲಯದ ಜೂನಿಯರ್ ಅಥ್ಲೆಟಿಕ್ಸ್ ನ 4×100 ಮೀಟರ್ ರಿಲೇ ರೇಸ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಉಡುಪಿ ಕ್ರೀಡಾ ಹಾಸ್ಟೆಲ್ ನ ಅಥ್ಲೀಟ್ಗಳಾದ. ಯತಿನ್ ನಾಯ್ಕ್, ಸನತ್ ಆಚಾರ್ಯ, ಪ್ರಜ್ವಲ್, ಎಮ್.ಡಿ ಕೋಸ್ಟ ಇವರ ರಿಲೇ ತಂಡ ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕವನ್ನು ಪಡೆಯುವುದರ ಜೊತೆಗೆ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಸ್ಪರ್ಧೆಗೆ ಆಯ್ಕೆಯಾಗಿರುವ ರಿಲೇ ತಂಡದ ಸದಸ್ಯನಾದ ಯತಿನ್ ನಾಯ್ಕ್ ಇವರು ಬೆಳ್ತಂಗಡಿ ತಾಲೂಕು ಕಲ್ಲೇರಿ ಗ್ರಾಮದ ಶ್ರೀಮತಿ ರೇವತಿ ಮತ್ತು ಧರ್ಮಣ್ಣ ನಾಯ್ಕ್ ದಂಪತಿಯ ಪುತ್ರನಾಗಿದ್ದು ಪ್ರಸ್ತುತ ಉಡುಪಿಯಲ್ಲಿ ಪದವಿ ವ್ಯಾಸಂಗ ನಿರತನಾಗಿದ್ದು ಈ ಹಿಂದೆಯೂ ಪ್ರಾಥಮಿಕ, ಹಾಗೂ ಪ್ರೌಢಶಾಲಾ ಹಂತದಲ್ಲಿ ಒಟ್ಟು ಮೂರು ಬಾರಿ 100 ಮೀಟರ್ ಓಟ ಹಾಗೂ 4*100 ಮೀಟರ್ ರಿಲೇಯಲ್ಲಿ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದರು.

Related posts

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

Suddi Udaya

ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

Suddi Udaya
error: Content is protected !!