23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

ಬೆಳ್ತಂಗಡಿ: ಆಂಧ್ರಪ್ರದೇಶದ ಗುಂಟೂರಿನಲ್ಲಿ ಇತ್ತೀಚೆಗೆ ನಡೆದ 35ನೇ ದಕ್ಷಿಣ ವಲಯದ ಜೂನಿಯರ್ ಅಥ್ಲೆಟಿಕ್ಸ್ ನ 4×100 ಮೀಟರ್ ರಿಲೇ ರೇಸ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಉಡುಪಿ ಕ್ರೀಡಾ ಹಾಸ್ಟೆಲ್ ನ ಅಥ್ಲೀಟ್ಗಳಾದ. ಯತಿನ್ ನಾಯ್ಕ್, ಸನತ್ ಆಚಾರ್ಯ, ಪ್ರಜ್ವಲ್, ಎಮ್.ಡಿ ಕೋಸ್ಟ ಇವರ ರಿಲೇ ತಂಡ ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕವನ್ನು ಪಡೆಯುವುದರ ಜೊತೆಗೆ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಸ್ಪರ್ಧೆಗೆ ಆಯ್ಕೆಯಾಗಿರುವ ರಿಲೇ ತಂಡದ ಸದಸ್ಯನಾದ ಯತಿನ್ ನಾಯ್ಕ್ ಇವರು ಬೆಳ್ತಂಗಡಿ ತಾಲೂಕು ಕಲ್ಲೇರಿ ಗ್ರಾಮದ ಶ್ರೀಮತಿ ರೇವತಿ ಮತ್ತು ಧರ್ಮಣ್ಣ ನಾಯ್ಕ್ ದಂಪತಿಯ ಪುತ್ರನಾಗಿದ್ದು ಪ್ರಸ್ತುತ ಉಡುಪಿಯಲ್ಲಿ ಪದವಿ ವ್ಯಾಸಂಗ ನಿರತನಾಗಿದ್ದು ಈ ಹಿಂದೆಯೂ ಪ್ರಾಥಮಿಕ, ಹಾಗೂ ಪ್ರೌಢಶಾಲಾ ಹಂತದಲ್ಲಿ ಒಟ್ಟು ಮೂರು ಬಾರಿ 100 ಮೀಟರ್ ಓಟ ಹಾಗೂ 4*100 ಮೀಟರ್ ರಿಲೇಯಲ್ಲಿ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದರು.

Related posts

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯುವದಿನೋತ್ಸವ ಆಚರಣೆ

Suddi Udaya

ಅಳದಂಗಡಿ: ಆಟೋ ಪಲ್ಟಿಯಾಗಿ ಚಾಲಕ ಸಾವು

Suddi Udaya

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya
error: Content is protected !!