July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

ಬೆಳ್ತಂಗಡಿ: ಆಂಧ್ರಪ್ರದೇಶದ ಗುಂಟೂರಿನಲ್ಲಿ ಇತ್ತೀಚೆಗೆ ನಡೆದ 35ನೇ ದಕ್ಷಿಣ ವಲಯದ ಜೂನಿಯರ್ ಅಥ್ಲೆಟಿಕ್ಸ್ ನ 4×100 ಮೀಟರ್ ರಿಲೇ ರೇಸ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಉಡುಪಿ ಕ್ರೀಡಾ ಹಾಸ್ಟೆಲ್ ನ ಅಥ್ಲೀಟ್ಗಳಾದ. ಯತಿನ್ ನಾಯ್ಕ್, ಸನತ್ ಆಚಾರ್ಯ, ಪ್ರಜ್ವಲ್, ಎಮ್.ಡಿ ಕೋಸ್ಟ ಇವರ ರಿಲೇ ತಂಡ ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕವನ್ನು ಪಡೆಯುವುದರ ಜೊತೆಗೆ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಸ್ಪರ್ಧೆಗೆ ಆಯ್ಕೆಯಾಗಿರುವ ರಿಲೇ ತಂಡದ ಸದಸ್ಯನಾದ ಯತಿನ್ ನಾಯ್ಕ್ ಇವರು ಬೆಳ್ತಂಗಡಿ ತಾಲೂಕು ಕಲ್ಲೇರಿ ಗ್ರಾಮದ ಶ್ರೀಮತಿ ರೇವತಿ ಮತ್ತು ಧರ್ಮಣ್ಣ ನಾಯ್ಕ್ ದಂಪತಿಯ ಪುತ್ರನಾಗಿದ್ದು ಪ್ರಸ್ತುತ ಉಡುಪಿಯಲ್ಲಿ ಪದವಿ ವ್ಯಾಸಂಗ ನಿರತನಾಗಿದ್ದು ಈ ಹಿಂದೆಯೂ ಪ್ರಾಥಮಿಕ, ಹಾಗೂ ಪ್ರೌಢಶಾಲಾ ಹಂತದಲ್ಲಿ ಒಟ್ಟು ಮೂರು ಬಾರಿ 100 ಮೀಟರ್ ಓಟ ಹಾಗೂ 4*100 ಮೀಟರ್ ರಿಲೇಯಲ್ಲಿ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದರು.

Related posts

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಿ.4 : ಶ್ರೀ ಕ್ಷೇತ್ರದಲ್ಲಿ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ,ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಹಸಿರು ಹೊರೆ ಕಾಣಿಕೆ ಸಮರ್ಪಣೆಯ ಬಗ್ಗೆ ಸಮಾಲೋಚನಾ ಸಭೆ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya

ಬ್ರಾಂಡೆಡ್ ಬಟ್ಟೆ ಖರೀದಿಗೆ ಸುವರ್ಣಾವಕಾಶ! ಶೇ.80 ರವರೆಗೆ ಬ್ರಾಂಡೆಡ್ ಬಟ್ಟೆಗಳ ಮೇಲೆ ಭಾರೀ ರಿಯಾಯಿತಿ

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya
error: Content is protected !!