23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ನಿರ್ಮಲ ಚಿತ್ತ ಲಹರಿ’ ಕವನ ಸಂಕಲನ ಬಿಡುಗಡೆ

ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅ.19 ರಂದು ಹತ್ತನೇ ತರಗತಿಯ ವಿದ್ಯಾರ್ಥಿ ನಿರಂಜನ ಶಿವಾನಂದ ಅಗಸಿಮನಿಯವರು ರಚಿಸಿದ ಕವನಗಳ ಕವನ ಸಂಕಲನ  ‘ನಿರ್ಮಲ ಚಿತ್ತ ಲಹರಿ’ ಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಸುಬ್ರಹ್ಮಣ್ಯ ಭಟ್ ಬಿಡುಗಡೆಗೊಳಿಸಿದರು.

ಕವನ ಸಂಕಲನದ ಪರಿಚಯವನ್ನು ಸರಕಾರಿ ಪದವಿಪೂರ್ವ ಕಾಲೇಜು, ಕೋಣಾಲಿನ ಉಪನ್ಯಾಸಕಿ ಶ್ರೀಮತಿ ಸುಪ್ರೀತಾ ಚರಣ್  ರವರು ಮಾಡಿದ್ದು, ಶಾಲಾ ಸಂಚಾಲಕಿ ಶ್ರೀಮತಿ ಶೀಲಾ ಎಸ್ ಹೆಗ್ಡೆಯವರು ಶುಭಾಂಸನೆಗೈದರು. ಸಂದರ್ಭದಲ್ಲಿ ಭಾರತೀಯ ಭೂಸೇನೆಗೆ  ಅಗ್ನಿವೀರ್ ಯೋಜನೆಯಲ್ಲಿ ಸೇರ್ಪಡೆಯಾದ ಶಾಲೆಯ ಹಳೆ ವಿದ್ಯಾರ್ಥಿ ಯಂ.ಜಿ. ಮಣಿಕಂಠರವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಪ್ರಬಂಧಕರಾದ ಕೆ. ಶಿವರಾಮ ಹೆಗ್ಡೆಯವರು ವಹಿಸಿದ್ದು,
ಶಾಲಾ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಪ್ರಶಾಂತ್, ಉಪಾಧ್ಯಕ್ಷ ರಾಜೇಶ್ ಮೂಡುಕೋಡಿ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುಜಾತರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರಿನ ಪ್ರಮುಖರು ಭಾಗವಹಿಸಿದ್ದರು.

Related posts

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಸವಣಾಲು: ಗುತ್ತಿನಬೈಲು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸಂಘ: 29ನೇ ವರ್ಷದ ವಾರ್ಷಿಕೋತ್ಸವ-ಸತ್ಯನಾರಾಯಣ ಪೂಜೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ನವೀನ ಗೋ-ಕಾರ್ಟ್ ಅಭಿವೃದ್ಧಿ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

Suddi Udaya
error: Content is protected !!