July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ನಿರ್ಮಲ ಚಿತ್ತ ಲಹರಿ’ ಕವನ ಸಂಕಲನ ಬಿಡುಗಡೆ

ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅ.19 ರಂದು ಹತ್ತನೇ ತರಗತಿಯ ವಿದ್ಯಾರ್ಥಿ ನಿರಂಜನ ಶಿವಾನಂದ ಅಗಸಿಮನಿಯವರು ರಚಿಸಿದ ಕವನಗಳ ಕವನ ಸಂಕಲನ  ‘ನಿರ್ಮಲ ಚಿತ್ತ ಲಹರಿ’ ಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಸುಬ್ರಹ್ಮಣ್ಯ ಭಟ್ ಬಿಡುಗಡೆಗೊಳಿಸಿದರು.

ಕವನ ಸಂಕಲನದ ಪರಿಚಯವನ್ನು ಸರಕಾರಿ ಪದವಿಪೂರ್ವ ಕಾಲೇಜು, ಕೋಣಾಲಿನ ಉಪನ್ಯಾಸಕಿ ಶ್ರೀಮತಿ ಸುಪ್ರೀತಾ ಚರಣ್  ರವರು ಮಾಡಿದ್ದು, ಶಾಲಾ ಸಂಚಾಲಕಿ ಶ್ರೀಮತಿ ಶೀಲಾ ಎಸ್ ಹೆಗ್ಡೆಯವರು ಶುಭಾಂಸನೆಗೈದರು. ಸಂದರ್ಭದಲ್ಲಿ ಭಾರತೀಯ ಭೂಸೇನೆಗೆ  ಅಗ್ನಿವೀರ್ ಯೋಜನೆಯಲ್ಲಿ ಸೇರ್ಪಡೆಯಾದ ಶಾಲೆಯ ಹಳೆ ವಿದ್ಯಾರ್ಥಿ ಯಂ.ಜಿ. ಮಣಿಕಂಠರವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಪ್ರಬಂಧಕರಾದ ಕೆ. ಶಿವರಾಮ ಹೆಗ್ಡೆಯವರು ವಹಿಸಿದ್ದು,
ಶಾಲಾ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಪ್ರಶಾಂತ್, ಉಪಾಧ್ಯಕ್ಷ ರಾಜೇಶ್ ಮೂಡುಕೋಡಿ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುಜಾತರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರಿನ ಪ್ರಮುಖರು ಭಾಗವಹಿಸಿದ್ದರು.

Related posts

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಹಳೆಯ ವಿದ್ಯಾರ್ಥಿಯ ಸಾಫ್ಟ್ ವೇರ್ ತಂಡದಿಂದ ಶಾಲೆಗೆ ಬಣ್ಣ

Suddi Udaya

ಸೆ.22-ಅ.1: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya

ನ.14: ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘ ನೇತೃತ್ವದಲ್ಲಿ ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆ

Suddi Udaya

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!