25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಅ.19 ರಂದು ಸುದರ್ಶನ ಚಕ್ರಗ್ರಹಣ ಎಂಬ ಯಕ್ಷಗಾನ ತಾಳಮದ್ದಳೆಯನ್ನು ವೇಣೂರಿನ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಸಂಘದ ಸದಸ್ಯರು ನಡೆಸಿಕೊಟ್ಟರು.

ಹಿಮ್ಮೇಳದಲ್ಲಿ ಭಾಗವತರಾಗಿ ಬಲಿಪ ಶಿವಶಂಕರ ಭಟ್, ಚೆಂಡೆ ಮದ್ದಳೆಗಳಲ್ಲಿ ಕೊಂಕಣಾಜೆ ಚಂದ್ರಶೇಖರ ಭಟ್ ಹಾಗೂ ಬೆಳಾಲು ಗಣೇಶ ಭಟ್, ಚಕ್ರತಾಳದಲ್ಲಿ ಇದೇ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿ ಸುಷೇಣರವರು ಸಹಕರಿಸಿದರು. ಶಾಲಾ ವಿದ್ಯಾರ್ಥಿಗಳಾದ ಒಂಬತ್ತನೆಯ ತರಗತಿಯ ರಂಜನಿ ಹಾಗೂ ನಾಲ್ಕನೇ ತರಗತಿಯ ಸುಷೇಣರು ಆಸಕ್ತಿಯಿಂದ ಭಾಗವಹಿಸಿದ್ದು ವಿಶೇಷವಾಗಿತ್ತು.


ಒಂಬತ್ತನೇ ತರಗತಿಯ ಕನ್ನಡ ಪಾಠದಲ್ಲಿ ಇರುವ ಈ ಭಾಗವನ್ನು ನಡೆಸಲು ಶಾಲಾ ಮುಖ್ಯ ಪ್ರಬಂಧಕರಾದ ಕೆ. ಶಿವರಾಮ ಹೆಗ್ಡೆಯವರು ಅವಕಾಶವನ್ನು ನೀಡಿದ್ದು, ಶಾಲಾ  ಸಂಚಾಲಕಿ ಶ್ರೀಮತಿ ಶೀಲಾ ಕೆ. ಎಸ್ ಹೆಗ್ಡೆ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುಜಾತ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಖ್ಯಾತ ಯಕ್ಷಗಾನ ಭಾಗವತರಾಗಿದ್ದ ದಿ. ಬಲಿಪ ಪ್ರಸಾದ ಭಟ್ ರವರ ಸ್ಮರಣೆಯನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರಿನ ಪ್ರಮುಖರು ನೆರೆದಿದ್ದರು.

Related posts

ಬಳಂಜ ಬೊಂಟ್ರೋಟ್ಟು ಕ್ಷೇತ್ರದ ಕಲಶಾಭಿಷೇಕದ ಕೂಪನ್ ಬಿಡುಗಡೆ: ಡಿ28 ರಿಂದ 31 ರವರೆಗೆ ಕಲಶಾಭಿಷೇಕ, ದೈವಗಳಿಗೆ ನರ್ತನ ಸೇವೆ, ಚಂಡಿಕಾಹೋಮ

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್ ಉದ್ಘಾಟನಾ ಸಮಾರಂಭ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya
error: Content is protected !!